Advertisement

Category: ಸಂಪಿಗೆ ಸ್ಪೆಷಲ್

ಒಡಹುಟ್ಟಿದವನ ಒಡಲಾಳದ ನೋವು!: ಶರಣಗೌಡ ಪಾಟೀಲ ತಿಳಗೂಳ ಪ್ರಬಂಧ

ಬಸ್ ಡಾಂಬರ್ ರಸ್ತೆ ಸೀಳಿಕೊಂಡು ಅರ್ಧ ದಾರಿ ಕ್ರಮಿಸಿತು. ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಜೋರಾಗಿ ಅಳುವ ಧನಿಯೊಂದು ಕೇಳಿ ಬಂದಿತು. ಎಲ್ಲರೂ ಗಾಬರಿಯಾಗಿ ಅತ್ತಕಡೆ ಗಮನ ಹರಿಸಿದರು. ನಾಗಚಂದ್ರನೂ ಆ ಕಡೆ ಹೊರಳಿ ನೋಡಿದ. ಇವನಿಗೆ ಆಶ್ಚರ್ಯದ ಜೊತೆಗೆ ಗಾಬರಿಯೂ ಆಯಿತು. ಅಳುವ ವ್ಯಕ್ತಿ ಸಾಮಾನ್ಯನಂತೆ ಕಾಣಿಸುತ್ತಿರಲಿಲ್ಲ. ಆತ ಬಟ್ಟೆ ಶಿಸ್ತಿನ ವ್ಯಕ್ತಿಯಾಗಿದ್ದ.
ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ ನಿಮ್ಮ ಓದಿಗೆ

Read More

ಸಂಜೆಗಣ್ಣಿನ ಚೆಲುವು : ಎಲ್.ಜಿ.ಮೀರಾ ಲಲಿತ ಪ್ರಬಂಧ

ಮೂರು ವರ್ಷ ಮುಗಿಯುತ್ತಿದ್ದಂತೆ ಮಂತ್ರಿಗಳು ಅವನ ಬಳಿ ಬಂದು “ನಾಳೆ ನಿಮ್ಮನ್ನು ಕಾಡಿಗೆ ಒಯ್ದು ಬಿಡುತ್ತೇವೆ, ತಯಾರಾಗಿರಿ” ಎಂದಾಗ ಅವನು ಸ್ವಲ್ಪವೂ ವಿಚಲಿತನಾಗದೆ ಒಪ್ಪಿಕೊಳ್ಳುತ್ತಾನೆ. ಮಾರನೆಯ ದಿನ ಅವನಿಗೆ ಇಷ್ಟವಾದ ಊಟತಿಂಡಿಗಳನ್ನು ಕೊಟ್ಟು ಊರಿನ ಪಕ್ಕದಲ್ಲಿದ್ದ ನದಿಯನ್ನು ದೋಣಿಯಲ್ಲಿ ದಾಟಿಸಿ ಅವನನ್ನು ಕಾಡಿಗೆ ಬಿಡಲು ಹೋದವರಿಗೆ ಒಂದು ಅಚ್ಚರಿ ಕಾದಿರುತ್ತದೆ. ಕೆಲವೇ ವರ್ಷಗಳ ಹಿಂದೆ ಗೊಂಡಾರಣ್ಯವಾಗಿದ್ದದ್ದು ಈಗ ನಾಡಾಗಿರುತ್ತದೆ!
ವೃದ್ಧಾಪ್ಯದ ದಿನಗಳ ಕುರಿತು ಡಾ. ಎಲ್.ಜಿ. ಮೀರಾ ಲಲಿತ ಪ್ರಬಂಧ

Read More

ಬೆಕ್ಕಾಯಣ…. ರಾಮಾಯಣ…: ವೇದ ಭದ್ರಾವತಿ ಬರಹ

ಹುಡುಗ ಎಲ್ಲ ಕಿಟಕಿಗಳನ್ನು ಮುಚ್ಚಿ ಬಾಗಿಲು ಹಾಕಿ ಒಮ್ಮೆ ನನ್ನ ಮುಖ ನೋಡಿ ಮೆಲ್ಲಗೆ, ಎರಡೂ ಮರಿಗಳು ಸತ್ತು ಹೋಗಿರುವುದನ್ನೂ ಗಂಡು ಬೆಕ್ಕು ಒಂದನ್ನು ಅರ್ಧ ತಿಂದಿರುವುದನ್ನೂ ಹೇಳಿದ. ನನಗೆ ಜಂಘಾಬಲ ಉಡುಗಿತು! ಮರಿಗಳಿಗಾಗಿ ಹೆಣ್ಣು ಉಗ್ರವಾಗಿ ಕಾದಾಡಿದ್ದು ಸ್ಪಷ್ಟವಾಗಿತ್ತು. ತನ್ನ ಮರಿಗಳಲ್ಲಿ ಯಾವುದೂ ಉಳಿದಿಲ್ಲವೆಂದು ಅದಕ್ಕೆ ತಿಳಿಸುವುದು ಹೇಗೆ?? ಇಷ್ಟು ದಿನ ನಮ್ಮನ್ನು ಕಂಡೊಡನೆ ಮಾರು ದೂರ ಓಡುತ್ತಿದ್ದ ತಾಯಿ ಈಗ ಮುಚ್ಚಿದ್ದ ಕಿಟಕಿಯನ್ನು ಹೊಗುವ ವಿಧಾನ ಹುಡುಕುತ್ತ, ತನ್ನ ಮರಿಗಳು ಅಲ್ಲಿವೆ ಎಂದೂ ನಾವು ಕಿಟಕಿ ತೆರೆದು ದಾರಿ ಕೊಡಬೇಕೆಂದೂ ದಯನೀಯ ಸ್ವರದಲ್ಲಿ ಅಂಗಲಾಚುತ್ತ ನಮ್ಮನ್ನೇ ದಿಟ್ಟಿಸತೊಡಗಿತ್ತು.
ಬೆಕ್ಕುಗಳ ಕುರಿತು ವೇದ ಭದ್ರಾವತಿ ಬರಹ ನಿಮ್ಮ ಓದಿಗೆ

Read More

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ಸರ್ವಶಕ್ತ ಮಹಿಳೆಯಲ್ಲ ನಾನು, ನಿಜ ಮಹಿಳೆ: ಎಲ್.ಜಿ.ಮೀರಾ ಬರಹ

ಉದ್ಯೋಗಸ್ಥ ಮಹಿಳೆಯ ಅಪರಾಧಿ ಪ್ರಜ್ಞೆಯು ಸಹ ಗಂಡಾಳಿಕೆಯ ಸಮಾಜವು ನಿರ್ಮಿಸಿದ್ದೇ ಆಗಿರುತ್ತೆ. ಸ್ತ್ರೀವಾದದ ಮಾತೃಚಿಂತಕಿಯರಲ್ಲೊಬ್ಬರಾದ ವರ್ಜೀನಿಯಾ ವೂಲ್ಫ್ ಹೇಳುವ ಗೃಹದೇವತೆಯ ಬಿಂಬ ನೆನಪಾಗುತ್ತೆ. `ಮನೆಕೆಲಸ, ಮನೆವಾಳ್ತೆ ಎಂದರೆ ಅದು ಹೆಣ್ಣಿನ ಜವಾಬ್ದಾರಿ ಮಾತ್ರ’ ಎಂದು ತಿಳಿದಿದ್ದ ಪರಿಸರದಲ್ಲಿ ಬೆಳೆದ ಹೆಂಗಸರಲ್ಲಿ, `ಮನೆಕೆಲಸವನ್ನು ಸರಿಯಾಗಿ ಮಾಡದಿರುವ ಬಗ್ಗೆ’ ಒಂದು ಅಪರಾಧಿ ಪ್ರಜ್ಞೆ ಇರುತ್ತದೆ. ಅವರ ಸುಪ್ತ ಮನಸ್ಸಿನಲ್ಲಿ ಅದು ಸೇರಿ ಹೋಗಿರುತ್ತದೇನೋ!
ಉದ್ಯೋಗಸ್ಥ ಮಹಿಳೆಯರು ಮನೆ-ಉದ್ಯೋಗ ಸಂಭಾಳಿಸುವುದರ ಕುರಿತು ಡಾ. ಎಲ್. ಜಿ. ಮೀರಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ