Advertisement

Category: ಸಂಪಿಗೆ ಸ್ಪೆಷಲ್

ಹೆತ್ತವರು ನೆಂಟರಾದಾಗ….

ಬೇಸಿಗೆ ರಜೆ ಬಂದರೆ ಸಾಕು ನಾನು ಅಮ್ಮನ ತವರೂರಿಗೆ ದೌಡಾಯಿಸುತ್ತಿದ್ದೆ. ಅಂಥದ್ದೇ ಒಂದು ಬೇಸಿಗೆ ರಜೆಯಲ್ಲಿ ತಿಂಗಳೆಲ್ಲ ಅಲ್ಲೇ ಟಿಕಾಣಿ ಹೂಡಿದ್ದ ನನ್ನ ಬಿಟ್ಟಿರಲಾಗದ ಅಪ್ಪ ಅಚಾನಕ್ಕಾಗಿ ನೋಡಲೆಂದು ಊರಿಗೆ ಬಂದಿದ್ದಾರೆ. ತಾತ ಮಾವಂದಿರು ಹೊಲಕ್ಕೆ ಹೋಗಿದ್ದು ಮನೆಯಲ್ಲಿದ್ದು ಅವ್ವ ಮಾತ್ರ. ಅಲ್ಲೇ ಹಜಾರದ ಬಾಗಿಲ ಬಳಿ ಮೊರದಲ್ಲಿ ರಾಗಿ ಕೇರುತ್ತಾ ಕುಳಿತಿದ್ದ ಅಳಿಯನ ನಿರೀಕ್ಷೆ ಇಲ್ಲದವಳ ಮುಂದೆ ಪ್ಯಾಂಟ್ ತೊಟ್ಟ ಎರಡು ಕಾಲುಗಳು ಕಾಣಿಸಿಕೊಂಡಿವೆ. ಮನೆಯ ಹೊಸಲು ಸ್ಪರ್ಶಿಸುವ ಪ್ಯಾಂಟುಧಾರನ ಪಾದಗಳೆಂದರೆ ಅದು ಅಳಿಯನೊಬ್ಬನದ್ದೆ ಎಂಬುದನ್ನು ಗ್ರಹಿಸಿದ ಅವಳು ತಲೆಯೆತ್ತಿಯೂ ನೋಡದೆ ಕೈಯಲ್ಲಿದ್ದ ಮೊರವನ್ನು ಗಾಬರಿಯಿಂದ ಬಿಸಾಡಿ ಓಡಿ ಹೋಗಿ ನಡುಮನೆಯನ್ನು ಸೇರಿಕೊಂಡಿದ್ದಳು.
ಮಾಲತಿ ಶಶಿಧರ್‌ ಬರಹ ನಿಮ್ಮ ಓದಿಗೆ

Read More

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಕಣ್ಣ ಹನಿ ಜಿನುಗಿಸುವ ಫೋಟೋ…

ಸಿನಿಮಾದ ಆರಂಭ ಮುಂಜಾನೆಯಿಂದ ಕ್ಯಾಮೆರಾ ಮೇಲಿಂದ ಕೆಳಗೆ ಪ್ಯಾನ್ ಆದರೆ ಸಿನಿಮಾದ ಅಂತ್ಯದಲ್ಲಿ ಮುಸ್ಸಂಜೆ ಮುಗಿದು ಕತ್ತಲು ಹರಿದು ದೀಪವೊಂದು ಆರಿ ಕತ್ತಲಾಗುತ್ತದೆ. ಕ್ಯಾಮೆರಾ ನಿಧಾನಕ್ಕೆ ಮೇಲಕ್ಕೆ ಪ್ಯಾನ್ ಆಗಿ ನಿಲ್ಲುತ್ತದೆ. ಕತೆ ಎಲ್ಲಿ ಶುರುವಾಯ್ತೊ ಅಲ್ಲೇ ಕೊನೆಯಾಗಿದೆ. ಫೋಟೋ ತೆಗೆಸಲು ಹೊರಟ ದುರ್ಗ್ಯಾ ನಮ್ಮೆಲ್ಲರಲ್ಲೂ ಕೂತುಬಿಡುತ್ತಾನೆ. ಇದು ನಿರ್ದೇಶಕರ ಮೊದಲ ಸಿನಿಮಾ ಅಂದಾಗ ಎಲ್ಲರಿಂದ ಓಹ್! ಎಂಬ ಉದ್ಘಾರ…
ಉತ್ಸವ್‌ ಗೋನವಾರ ನಿರ್ದೇಶನದ “ಫೋಟೋ” ಸಿನಿಮಾದ ಕುರಿತು ಜಯರಾಮಾಚಾರಿ ಬರಹ

Read More

ಏನೋ ಹೇಳಬೇಕು…

ನೂರಾರು ಪ್ರಶ್ನೆಗಳೊಂದಿಗೆ, ಮಗ್ಗಲು ಬದಲಿಸುವ ಬದುಕಿನ ಬದುವಿನಲ್ಲಿ ಹುಡುಕಾಟ ತೀವ್ರಗೊಂಡ ನೆಲೆಯಲ್ಲಿ ಆಧ್ಯಾತ್ಮದ ಗವಿಯೊಳಗೆ ಬೆಳಕು ಕಾಣಲು ಹಂಬಲಿಸಿ, ಬದುಕನ್ನು ಭಿನ್ನ ಪಾತಾಳಿಯಲ್ಲಿ ಕಾಣುವ ಹಠಕ್ಕೆ ಬಿದ್ದವನಿಗೆ ಈ ಕವಿತೆಗಳ ಕಡೆ ಅದೇನೋ ತದೇಕ ಸೆಳೆತ ಮತ್ತು ದಿನದಿಂದ ದಿನಕ್ಕೆ ಎಲ್ಲರಿಂದಲೂ ಬಹುದೂರ ಸಾಗುತ್ತಿದ್ದೇನೆ ಅನಿಸಿದರೂ; ನನಗೆ ನಾನು ತುಂಬಾ ಹತ್ತಿರವಾಗುತ್ತಿದ್ದೇನೆ ಎಂದೆನಿಸಿದೆ. ದ್ರುತಗತಿಯ ಹಾದಿ ತುಳಿಯದೇ ಒಂದೊಂದಾಗಿ ಕಳಚಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ. ಸುಮಿತ್‌ ಮೇತ್ರಿ ಬರಹ

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ