Advertisement

Category: ಸಂಪಿಗೆ ಸ್ಪೆಷಲ್

ಒರಗಿಕೊಳ್ಳುವ ಮುನ್ನ….

ರಜಾದಿನಗಳ ಮಧ್ಯಾಹ್ನಗಳಲ್ಲಿ ನಾನು ಆಕೆ ಮನೆಯ ಆ ನೀಲಿ ಬಾಗಿಲನ್ನ ಧಡ ಧಡ ಬಡಿಯುತ್ತ ನಿಂತು ಬಿಡುತ್ತಿದ್ದೆ, ಮೊದಮೊದಲು, ಬಾಗಿಲು ತೆಗೆದು ಆಮೇಲ್ ಬಾ ಮಾಮ ಮಕ್ಕೊಂಡಾರು ಅನ್ನುತ್ತಿದ್ದ ಅಕ್ಕ, ಆಮೇಲೆ ಒಳಗಿನಿಂದಲೇ ಕೂಗಲು ಶುರು ಮಾಡಿದಳು. ಆನಂತರ ಉತ್ತರಿಸುವ ಗೋಜಿಗೂ ಹೋಗಲಿಲ್ಲ. ಆಗೆಲ್ಲ ಸಿಕ್ಕಾಪಟ್ಟೆ ಅವಮಾನವಾಗಿ ಕಣ್ಣು ತುಂಬಿಕೊಂಡು ಮನೆಗೆ ಹೋಗುತ್ತಿದ್ದೆ. ನನ್ನ ಅಳುವಿಗೆ ಕಾರಣ ಕೇಳುವಷ್ಟು ವ್ಯವಧಾನ ಯಾರಿಗೂ ಇರಲಿಲ್ಲ. ನನ್ನ ದೋಸ್ತರಾಗಿದ್ದ ಮರಗಳು ಕೂಡ ನನ್ನ ಹತ್ತಿರ ಮಾತು ಬಿಟ್ಟಂತೆ ನನಗೆ ಭಾಸವಾಗುತ್ತಿತ್ತು, ಯಾಕೆಂದರೆ ಅಕ್ಕ ಸಿಕ್ಕಿದ್ದೇ ಸಿಕ್ಕಿದ್ದು… ಮೌನವಾಗಿ ಮಾತನಾಡುವ ಸ್ನೇಹಿತರಿಗಿಂತ ಮಾತನಾಡುವ ಜೀವಕ್ಕೆ ನಾನು ಆದ್ಯತೆ ಕೊಟ್ಟಿದ್ದು ಅವಕ್ಕೂ ಸಿಟ್ಟು ಬಂದಿತ್ತೇನೋ.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಅಡ್ಮಿನ್ ಸೂತ್ರಧಾರಿ, ನಾವ್ ಪಾತ್ರಧಾರಿ

ಸಮಾನ ಮನಸ್ಕರ ನಡುವೆ ಸಂವಹನ ಸಾವಧಾನವಾಗಿ ಆದಾಗ ಒಳ್ಳೆಯದೆ ಆಗುತ್ತದೆ. ಅಲ್ಲಿಯೇ ಆರೋಗ್ಯಕರ ಚರ್ಚೆಗಳು ಪ್ರಾಂಭವಾಗುತ್ತವೆ. ಗುಂಪಿನಲ್ಲಿ ನಡೆಯುವ ಚರ್ಚೆಗಳು ಅನ್ಯ ಗುಂಪಿಗೂ ಹರಿಯಬಹುದು. ಪರಸ್ಪರ ಅಭಿನಂದನೆಗಳಿಗೆ ಧನ್ಯವಾದಗಳು ಒಂದು ಹಂತಕ್ಕೆ ಇದ್ದರೆ ಚಂದ ಅತಿಯಾದರೆ ಅಸಹ್ಯ! ಕ್ಷಮಿಸಿ ‘ಅಸಹ್ಯ’ ಎಂದರೆ ‘ಹೊಲಸು’ ಎಂದಲ್ಲ ಇತ್ತೀಚೆಗೆ ಹೀನಾರ್ಥ ಪಡೆದುಕೊಂಡಿರುವುದು ಅ-ಸಹ್ಯ ಎಂದರೆ ಸಹಿಸಲು ಸಾಧ್ಯವಾಗದೆ ಇರುವುದೆಂದು. ಸಂದೇಶಗಳು, ಸುತ್ತೋಲೆ, ಜ್ಞಾಪಕ ಇದ್ದಂತೆ, ಏಕ ಕಾಲಕ್ಕೆ ಅನೇಕರಿಗೆ ಸಂದೇಶ ರವಾನೆಯಾಗುತ್ತದೆ ಉದಾಹರಣೆಗೆ, ಸರಕಾರದ ಆದೇಶ ಮದುವೆ ದಿನಾಂಕ, ಕೆಲಸಗಾರರಿಗೆ ಏಕ ಕಾಲದಲ್ಲಿ ಸಂದೇಶ ತಲುಪಿಸಲು ಬಹಳ ಅನುಕೂಲವಾಗಿದೆ ಇತ್ಯಾದಿ.
ಸುಮಾವೀಣಾ ಬರಹ ನಿಮ್ಮ ಓದಿಗೆ.

Read More

ಭಾವಗೀತೆಗಳ ಭಾವಗುಚ್ಛ….

ರಾಜಕೀಯ ಭಾಷಣಗಳ ಮುನ್ನ ಜನರನ್ನು ಮೈದಾನಗಳಿಗೆ ಕರೆತರುತ್ತಿದ್ದುದೇ ಈ ಜೋರಾಗಿ ಕೇಳಿಸುತ್ತಿದ್ದ ಹಾಡುಗಳು. ಎಲ್ಲೆಲ್ಲೂ ಈ ಹಾಡುಗಳು ಮೊಳಗುತ್ತಿದ್ದವು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಎಲ್ಲಿಯಾದರೂ ಉತ್ಸವಗಳಲ್ಲಿ ಹಾಡಲು ಬಂದಾಗ ಈ ಗೀತೆಗಳನ್ನು ಹಾಡಲಿ ಎಂದು ಜನ ಅಪೇಕ್ಷೆ ಪಡುತ್ತಿದ್ದರು. ಸಿ. ಅಶ್ವಥ್ ಅವರ ಸಂಗೀತ ಮತ್ತು ವೈದ್ಯನಾಥನ್ ಅವರ ವಾದ್ಯಸಂಯೋಜನೆಯಲ್ಲಿ ಮೂಡಿ ಬಂದ ಭಾವಗೀತೆಗಳು ಇವು. ಒಂದು ರೀತಿ ಸಿನಿಮಾ ಗೀತೆಗಳು ಭಾಸವಾಗುತ್ತಿದ್ದವು.
ಕವಿ ದೊಡ್ಡರಂಗೇಗೌಡರ ಕವಿತೆಗಳನ್ನಿಟ್ಟುಕೊಂಡು ಸುಚೇಂದ್ರ ಪ್ರಸಾದ್‌ ನಿರ್ದೇಶಿಸಿರುವ ಸಿನಿಮಾ “ಮಾವು ಬೇವು” ಕುರಿತು ಬಿ.ಕೆ. ಸುಮತಿ ಬರಹ

Read More

ಹೆತ್ತವರು ನೆಂಟರಾದಾಗ….

ಬೇಸಿಗೆ ರಜೆ ಬಂದರೆ ಸಾಕು ನಾನು ಅಮ್ಮನ ತವರೂರಿಗೆ ದೌಡಾಯಿಸುತ್ತಿದ್ದೆ. ಅಂಥದ್ದೇ ಒಂದು ಬೇಸಿಗೆ ರಜೆಯಲ್ಲಿ ತಿಂಗಳೆಲ್ಲ ಅಲ್ಲೇ ಟಿಕಾಣಿ ಹೂಡಿದ್ದ ನನ್ನ ಬಿಟ್ಟಿರಲಾಗದ ಅಪ್ಪ ಅಚಾನಕ್ಕಾಗಿ ನೋಡಲೆಂದು ಊರಿಗೆ ಬಂದಿದ್ದಾರೆ. ತಾತ ಮಾವಂದಿರು ಹೊಲಕ್ಕೆ ಹೋಗಿದ್ದು ಮನೆಯಲ್ಲಿದ್ದು ಅವ್ವ ಮಾತ್ರ. ಅಲ್ಲೇ ಹಜಾರದ ಬಾಗಿಲ ಬಳಿ ಮೊರದಲ್ಲಿ ರಾಗಿ ಕೇರುತ್ತಾ ಕುಳಿತಿದ್ದ ಅಳಿಯನ ನಿರೀಕ್ಷೆ ಇಲ್ಲದವಳ ಮುಂದೆ ಪ್ಯಾಂಟ್ ತೊಟ್ಟ ಎರಡು ಕಾಲುಗಳು ಕಾಣಿಸಿಕೊಂಡಿವೆ. ಮನೆಯ ಹೊಸಲು ಸ್ಪರ್ಶಿಸುವ ಪ್ಯಾಂಟುಧಾರನ ಪಾದಗಳೆಂದರೆ ಅದು ಅಳಿಯನೊಬ್ಬನದ್ದೆ ಎಂಬುದನ್ನು ಗ್ರಹಿಸಿದ ಅವಳು ತಲೆಯೆತ್ತಿಯೂ ನೋಡದೆ ಕೈಯಲ್ಲಿದ್ದ ಮೊರವನ್ನು ಗಾಬರಿಯಿಂದ ಬಿಸಾಡಿ ಓಡಿ ಹೋಗಿ ನಡುಮನೆಯನ್ನು ಸೇರಿಕೊಂಡಿದ್ದಳು.
ಮಾಲತಿ ಶಶಿಧರ್‌ ಬರಹ ನಿಮ್ಮ ಓದಿಗೆ

Read More

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ