Advertisement

Category: ಸಂಪಿಗೆ ಸ್ಪೆಷಲ್

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

Read More

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ