Advertisement

Category: ಸಂಪಿಗೆ ಸ್ಪೆಷಲ್

ಅಂತ್ಯವಿಲ್ಲದೊಂದು ಕತೆ: ನಿ”ಶಾಂತ” ಬರಹ

ಆಮೇಲೆ ಬರುಬರುತ್ತಾ ನಮ್ಮ ಭೇಟಿಯ ದಿನಗಳು ಕ್ಷೀಣಿಸಿದವು. ಆದರೂ ಯಾಕೋ ಆ ಕಾರಣಕ್ಕೆ ಇಬ್ಬರೂ ಜಗಳ ತೆಗೆಯುವುದನ್ನು ನಿಲ್ಲಿಸಿದ್ದೆವು. ಒಬ್ಬರು ಸಿಗ್ತಿಯಾ ಅಂದಾಗ, ಬೆಂಗಳೂರಿನ ಆ ತುದಿಯಲ್ಲಿದ್ದರೂ ಬಂದು ಭೇಟಿ ಮಾಡಿಹೋಗುತ್ತಿದ್ದೆವು. ಮತ್ತೆ ಮುಂದಿನ ಭೇಟಿ ಬಗ್ಗೆ ಮಾತೇ ಇಲ್ಲ… ಸುಮ್ಮನೇ ನಮ್‌ನಮ್ಮ ಕೆಲಸಗಳ ಕುರಿತು, ಮನೆಯ ಪರಿಸ್ಥಿತಿಗಳ ಕುರಿತ ಮಾತಷ್ಟೇ. ಅಲ್ಲಿ ಯಾವುದೇ ಕವಿತೆಗೂ, ಗಜಲ್‌ಗೂ ಅವಕಾಶವಿರುತ್ತಿರಲಿಲ್ಲ. ಅದು ಇಬ್ಬರಿಗೂ ಬೇಕಾಗೂ ಇರಲಿಲ್ಲವೆನ್ನಿಸುತ್ತೆ. ಹಾಗಾಗಿ ಮೂರು ವರ್ಷಗಳ ಒಡನಾಟದ ಸಲುವಾಗಿಯಾದರೂ ಒಂದು ಗುಡ್‌ಬೈ ಸಹ ಹೇಳದೇ ನಮ್ಮ ನಮ್ಮ ಬದುಕಿನ ಹಾದಿಯಲ್ಲಿ ಸಿಕ್ಕ ತಿರುವುಗಳಲ್ಲಿ ನಡೆದುಹೋಗಿಬಿಟ್ಟಿದ್ದೆವು.
 “ದಡ ಸೇರದ ದೋಣಿ” ಹೊಸ ಸರಣಿಯಲ್ಲಿ ಅಂತ್ಯ ಸಿಕ್ಕದ ಪ್ರೇಮವೊಂದರ ಕುರಿತು ನಿ”ಶಾಂತ” ಬರಹ

Read More

ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್‌ ಬರಹ

ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಬರಹ

ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್‌ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್‌ ಬಾಂಡ್‌ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಮನೆಯವರ ಮನಗಳಲ್ಲಿ ಸಾಯುವವರ ಕತೆ: ರೂಪಶ್ರೀ ಕಲ್ಲಿಗನೂರ್‌ ಬರಹ

ಜೊತೆಯಲ್ಲಿ ಯಾರೂ ಇಲ್ಲದ್ದರಿಂದ, ಅವರ ಜೋಬಿನಲ್ಲಿದ್ದ ಮೊಬೈಲ್‌ ತೆಗೆದುಕೊಂಡು ಅದಕ್ಕೆ ಬಂದ-ಹೋದ ಒಂದಷ್ಟು ನಂಬರ್‌ಗಳಿಗೆ ಕಾಲ್‌ ಮಾಡಿ ವಿಷಯ ತಿಳಿಸಿದ್ದರು. ನಂತರ ಮೃತದೇಹವನ್ನು ಊರಿಗೆ ತರಿಸಿಕೊಂಡು ಎಲ್ಲ ಕಾರ್ಯಗಳನ್ನು ಮಾಡಿ ಮನೆಗೆ ಹೋಗುವಾಗ ಯಾರ ಕಣ್ಣಲ್ಲೂ ಹನಿ ನೀರುಕಾಣಲಿಲ್ಲ… ಅವರರ್ಯಾರ ಮುಖದಲ್ಲಿ ಅಯ್ಯೋ ತಮ್ಮ ಮನೆಯ ಸದಸ್ಯನೊಬ್ಬನನ್ನು ಕಳೆದುಕೊಂಡೆವಲ್ಲ ಎನ್ನುವ ನೋವು ಕಾಣಿಸುತ್ತಿರಲಿಲ್ಲ.. ಬದಲಾಗಿ ಅಕ್ಕ-ತಂಗಿಯರಾಗಿ ಎಲ್ಲರೂ ತಮ್ಮ ಕಾರ್ಯಗಳನ್ನು ಸರಿಯಾಗಿ ಮಾಡಿ-ಮುಗಿಸಿದೆವಲ್ಲ… ದೇವರಿಗೆ ನಮ್ಮ ಮೇಲೆ ಸ್ವಲ್ಪವಾದರೂ ಕರುಣೆ ಇದೆಯಪ್ಪ.. ಎನ್ನಿಸಿತ್ತು. ಅಷ್ಟೇ.
ರೂಪಶ್ರೀ ಕಲ್ಲಿಗನೂರ್ ಬರಹ ನಿಮ್ಮ ಓದಿಗೆ

Read More

ಪೆಟ್ಟುಮಾಡಿಕೊಂಡ ಕಿಟ್ಟಪ್ಪನಿಗೆ ಸಂದ ಪೂಜೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲಿ ನನ್ನ ಸಂಪೂರ್ಣ ತಲಾಶ್ ನಡೆಯಿತು. ಎಡಗೈ ಇನ್ನೂ ನೇತಾಡುತ್ತಾ ಇತ್ತಲ್ಲ. ಅದನ್ನ ಹೇಗೋ ಮಡಿಸಿ ಒಂದು ಪಂಚೆಯನ್ನ ಸ್ವಿಂಗ್ ತರಹ ಮಾಡಿ ಕೊರಳಿಗೆ ನೇತು ಹಾಕಿದ್ದಳು. ಇಷ್ಟು ಹೊತ್ತಿಗೆ ಮೈಮೇಲೆ ಬಂದಿದ್ದ ಚಾಮುಂಡಿ ದೇವತೆ ಕೊಂಚ ಶಾಂತವಾಗಿತ್ತು. ತಟ್ಟೆಯಲ್ಲಿ ಅನ್ನ, ದಂಟಿನ ಸೊಪ್ಪಿನ ಹುಳಿ ಕಲಸಿ ಕೊಟ್ಟಳು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆರಡನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ