Advertisement

Category: ಸಂಪಿಗೆ ಸ್ಪೆಷಲ್

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

‘ತವರಿಗೂ ಒಂದು ತವರು ಹಿಂಬಾಗಿಲು’

ಆಧುನಿಕ ಮನೆಗಳಲ್ಲಿ ಹಿಂಬಾಗಿಲಿಗೆ ಜಾಗವೇ ಇರುವುದಿಲ್ಲ. ಒಂದುವೇಳೆ ಹಿಂಬಾಗಿಲು ಇದ್ದರೂ, ಅದರ ವಿನ್ಯಾಸದಲ್ಲಿ ಎಷ್ಟೊಂದು ಒಪ್ಪ ಓರಣ ಇರುತ್ತದೆ. ಕಾಲ ಬದಲಾದಂತೆ ಹಿಂಬಾಗಿಲ ಅವಶ್ಯಕತೆಯೂ ಇಲ್ಲವಾಗಿದೆ. ಆದರೆ ಹಿಂದಿನ ಕಾಲದ ಮನೆಗಳಲ್ಲಿ ಒಪ್ಪ ಓರಣಕ್ಕೆ ಆದ್ಯತೆಯಿಲ್ಲದ ಹಿಂಬಾಗಿಲುಗಳ ಬಳಿಯೇ ಹೃದಯ ಬಿಚ್ಚಿ ಮಾತನಾಡುವ ‘ತಾವು’ ಇರುತ್ತಿತ್ತು. ಹಿಂಬಾಗಿಲುಗಳ ಈ ಲೋಕವು…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ