Advertisement

Category: ಸಂಪಿಗೆ ಸ್ಪೆಷಲ್

ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ನಾವು ಅಲ್ಲಿಗೆ ಹೋಗಿ ತಾಸು ಹೊತ್ತಿನ ಮೇಲೆ ಒಂದೊಂದೇ ಆನೆಗಳು ಮೆಲ್ಲಗೆ ತಮ್ಮ ಮೇಲೆ ನಿಂತಿದ್ದ ಎರಡು-ಮೂರು ಜನ ಹಾಗೂ ಮಾವುತರೊಟ್ಟಿಗೆ, ದೇವಸ್ಥಾನದ ಒಳಗೆ ಹೊರಡಲಾರಂಭಿಸಿದವು. ನಮಗೆ ಮೂರ್ನಾಲ್ಕು ಆನೆಗಳನ್ನು ಹತ್ತಿರದಿಂದಲೇ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಇನ್ನೇನು ಆ ಕಾರ್ಯಕ್ರಮ ಮುಗಿಯುವ ಹಂತಕ್ಕೆ ಬಂದಾಗ, ನಾವು ಮೆಲ್ಲನೆ ಅಲ್ಲಿಂದ ಹೊರಟು, ಕಾಂಪೌಂಡ್‌ನ ಇನ್ನೊಂದು ಬದಿಗೆ ಬಂದು, ಆನೆಗಳ ಸಾಲು ನಿಂತಿದ್ದಲ್ಲಿಗೆ ಹೋದಾಗ, ಅಲ್ಲಿ ಆಗಲೇ ಜನರ ಗುಂಪು ಮೆಲ್ಲನೆ ಕರಗಲಾರಂಭಿಸಿದ ಕಾರಣ, ಅಲ್ಲಿ ಇನ್ನೊಂದಷ್ಟು ಹತ್ತಿರದಿಂದ ಆನೆಗಳನ್ನು ಕಾಣಲು ಸಿಕ್ಕಿತು.
ಕೇರಳದ ತ್ರಿಶ್ಶೂರ್‌ ಪೂರ ಕುರಿತು ತಮ್ಮ ಅನುಭವಗಳನ್ನು ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಹಾಗಾದರೆ ನಾನು ನಿಮಗೆ ಬೇಡವಾ.. ಮಳೆಯದ್ದೊಂದು ಪ್ರಶ್ನೆ

ಈ ಮಳೆಯೋ ಜೀವ ಸಂಕುಲವನ್ನು ಉಳಿಸಲೆಂದೇ ದೇವರು ಬಂದಂತೆ ಪ್ರತೀ ವರ್ಷ ನಮ್ಮ ಮೇಲೆ ನಂಬಿಕೆಯಿಟ್ಟು ಬರುತ್ತದೆ. ಅದು ಕೊಡುವ ಖುಷಿಯಿಂದ ಕವನವೊಂದು ಮೊಳಕೆಯೊಡೆದರೆ ಆ ಸಾಲುಗಳನ್ನು ಯಾರೊಡನೆ ಹಂಚಿಕೊಳ್ಳಬೇಕು ಎಂದು ತಿಳಿಯದೇ ಮನಸ್ಸು ತಬ್ಬಿಬ್ಬಾಗುತ್ತದೆ. ಎಲ್ಲಿಯೂ ಹರಿದು ಹೋಗಲು ಒಂದಿಷ್ಟು ಜಾಗವಿಲ್ಲದೇ, ಬಂಧಿಯಾದಂತೆ ಚಡಪಡಿಸುವ ಮಳೆನೀರಿಗೆ ‘ಪ್ರವಾಹ’ವೆಂಬ ನಾಮಕರಣವಾಗಿದೆ. ಆದರೂ ಈ ಮಳೆಯೋ ನಿಸ್ವಾರ್ಥಿ ಪ್ರೇಮಿಯಂತೆ ನಮ್ಮನ್ನು ಹಚ್ಚಿಕೊಂಡು, ಮುದ್ದಿಸುತ್ತ ಸುಮ್ಮನೇ ಸುರಿಯುತ್ತಿದೆ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಇಂದಿನ ಓದಿಗಾಗಿ.

Read More

ಪುರಸ್ಕಾರ ದೊಡ್ಡದೋ ನಗದು ದೊಡ್ಡದೋ: ಒಂದು ಸಾಹಿತ್ಯಿಕ ಜಿಜ್ಞಾಸೆ

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ರೀತಿಯ ಪ್ರಶಸ್ತಿಗಳಿವೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಮಂದಿ ಹಿರಿಯರು, ಪೂರ್ವಿಕರು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಪ್ರಶಸ್ತಿಗಳನ್ನು ನೀಡಲು ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ. ಆದರೆ ಆ ದತ್ತಿನಿಧಿಯ ಬಡ್ಡಿ ಮೊತ್ತ ಕಿರಿದಾಗುತ್ತಿರುವುದರಿಂದ, ಪ್ರಸ್ತುತ ಪ್ರಶಸ್ತಿಯ ಜೊತೆಗಿರುವ ನಗದು ಬಹುಮಾನವು ತೀರಾ ಕಿರಿದಾಗಿದೆ. ಅದನ್ನು ಹೆಚ್ಚಿಸುವ ಅಥವಾ ಪ್ರಶಸ್ತಿಯ ವಿಧಾನವನ್ನು ಪರಿಷ್ಕರಿಸುವ ಪ್ರಯತ್ನಗಳಾಗಬೇಕು ಎಂಬ ನಿಟ್ಟಿನಲ್ಲಿ ಲೇಖನವೊಂದನ್ನು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿದ್ದಾರೆ.

Read More

ತನ್ನ ಪಾಡಿಗೆ ಬೆಳಗನ್ನು ಆನಂದಿಸುತ್ತಿದ್ದ ಕವಿಮನೆ

ಕವಿಶೈಲಕ್ಕೆ ಎಷ್ಟೊಂದು ಜನರು  ಪ್ರವಾಸಿಗರಾಗಿ ಬಂದಿದ್ದರು !  ಬಂದಷ್ಟು ಜನರಲ್ಲಿ ಕೇವಲ ಒಂದು ಪರ್ಸೆಂಟ್‌ ನಷ್ಟು ಮಾತ್ರದವರು ಕೆಲಕಾಲ ಸುಮ್ಮನೆ ಇದ್ದು ಹೋದರು. ಬಹುತೇಕರು ಎಲ್ಲಿ ನಿಂತುಕೊಂಡರೆ ಫೋಟೋ ಚೆನ್ನಾಗಿ ಬರಬಹುದು? ರೀಲ್ಸ್‌ಗೆ ಯಾವ ಜಾಗ ಸೂಕ್ತ? ಅನ್ನುವ ಯೋಚನೆಯಲ್ಲಿದ್ದವರೇ. ಸುತ್ತಲಿನ ಮೌನವನ್ನು ಸವಿಯುವುದಕ್ಕೆ ಮುಂಜಾನೆ  ಮಂಜಿನಲ್ಲಿ ಕುಪ್ಪಳಿಯ ಕವಿಮನೆ ಮತ್ತು ಕವಿಶೈಲಕ್ಕೆ ಭೇಟಿ ನೀಡಿದ ಒಂದು ಅನುಭವವನ್ನು ಪ್ರಸ್ತುತಪಡಿಸಿದ್ದಾರೆ ರೂಪಶ್ರೀ ಕಲ್ಲಿಗನೂರು.

Read More

ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..

ಕಾಡನ್ನೇ ಆಶ್ರಯಿಸಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಆದಿವಾಸಿ ಸಮುದಾಯಗಳು ಅರಣ್ಯ ಪರಿಸರದ ವಿಶಿಷ್ಟತೆಯನ್ನು ಕಾಪಿಟ್ಟುಕೊಳ್ಳುವಲ್ಲಿ ಮಹತ್ತರ ಪಾತ್ರವನ್ನು ಹೊಂದಿವೆ. ಔಪಚಾರಿಕ ಶಿಕ್ಷಣವನ್ನು ಪಡೆಯದೆಯೂ ಇಂತಹ ಸಮುದಾಯಗಳ ಜನರು ಹೊಂದಿರುವ ಜ್ಞಾನ ವಿಸ್ತಾರವಾದುದು. ಅವರಿಗೆ ದೊರೆತ  ತಿಳಿವಳಿಕೆಯು ಅರಣ್ಯಜನ್ಯವಾದುದು.  ಈ ಸಮುದಾಯಗಳ ಆಚರಣೆ- ನಂಬಿಕೆಗಳು ಅರಣ್ಯಕೇಂದ್ರಿತವಾಗಿವೆ ಮತ್ತು ಅರಣ್ಯಪರವಾಗಿವೆ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಪರಿಸರ ಕುರಿತ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ