Advertisement

Category: ಸಂಪಿಗೆ ಸ್ಪೆಷಲ್

ನಾಳೆಗೆಂದು ತೆಗೆದಿರಿಸಿದ ಮುಷ್ಟಿ ಪೃಥುಕ

ನಾಳೆಯೆಂಬುದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಇಂದಿನ ಜೀವನವನ್ನು ದಾಟುವುದಕ್ಕಾಗಿ ಪ್ರೇರಣೆಯಾಗಿರುವುದು ಈ ʻನಾಳೆʼಗಳು ಅಲ್ಲವೇ. ಜಗತ್ತಿನ ಎಲ್ಲ ಜೀವಿಗಳೂ ನಾಳೆಗಳನ್ನು ಎಷ್ಟೊಂದು ಜತನ ಮಾಡುತ್ತವೆ. ಅದಕ್ಕಾಗಿ ಸದಾ ಶ್ರಮಿಸುತ್ತಲೇ ಇರುತ್ತವೆ. ಆದರೆ ಅದ್ಯಾಕೋ, ಈ ಜೀವಿಗಳ ಸಾಲಿನಲ್ಲಿ ಮನುಷ್ಯನ ಸ್ವಭಾವ ಮಾತ್ರ ವಿಭಿನ್ನವಾಗಿರುತ್ತವೆ. ಮನುಷ್ಯನೂ ನಾಳೆಗಳ ಬಗ್ಗೆ ಯೋಚಿಸಿದರೂ, ಅದಕ್ಕಾಗಿ ಮಾಡುವ ತಯಾರಿ ಮಾತ್ರ ತದ್ವಿರುದ್ಧವಾದುದು. ಸಂಪತ್ತನ್ನು ಜಮೆ ಮಾಡಿದಷ್ಟೂ ತಮ್ಮ ನಾಳೆಗಳು ಭದ್ರವಾಗಿರುತ್ತವೆ ಎಂದು ಭಾವಿಸುತ್ತ ಎಲ್ಲ ಜೀವಿಗಳಿಗೂ ತೊಂದರೆಯುಂಟು ಮಾಡುತ್ತಾನೆ ಎಂದು ಅನಿಸುತ್ತದೆ.
ಕೋಡಿಬೆಟ್ಟು ರಾಜಲಕ್ಷ್ಮಿಬರೆದ ಲೇಖನ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು ಎಂಬುದನ್ನು ಅವರು ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಸರಕು ಮತ್ತು ಸಂಪ್ರದಾಯ

ಎಲ್ಲವೂ ಸರಕಾಗುತ್ತಿರುವ ಸಮಾಜದಲ್ಲಿ ನಾವಿರುವಾಗ ಸಂಪ್ರದಾಯದ ಮೇಲೆ ಅದರ ಪರಿಣಾಮಗಳೇನು? ಸರ್ವವ್ಯಾಪಿಯಾದ ವ್ಯವಸ್ಥೆ ಸಂಪ್ರದಾಯವನ್ನು ಮುಟ್ಟದೇ ಇರುತ್ತದೆಯೇ? ಸಂಪ್ರದಾಯದ ಪ್ರತಿಕ್ರಿಯೆಯ ಸಮಸ್ಯೆಗಳೇನು ಎನ್ನುವುದನ್ನು ನೋಡೋಣ. ಸಂಪ್ರದಾಯವೆನ್ನುವುದು ಸರಳವಾಗಿ ಹೇಳುವುದಾದರೆ ನಮ್ಮ ಹಿರಿಯರಿಂದ ಬಂದಿದ್ದು. ಪೀಳಿಗೆಯಿಂದ ಪೀಳಿಗೆಗೆ ಬರುವಂತದ್ದು. ಹಿರಿಯರು, ಪೀಳಿಗೆ ಅಂದಾಗ ಅದು ಸಮುದಾಯವನ್ನು, ಕುಟುಂಬವನ್ನು ಒಳಗೊಂಡಿದೆ ಎನ್ನುವುದನ್ನು ಸೂಚಿಸುತ್ತದೆ. ಕೃತಿ ಪುರಪ್ಪೇಮನೆ ಬರೆಯುವ “ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಹೊಸ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ