Advertisement

Category: ಸಂಪಿಗೆ ಸ್ಪೆಷಲ್

ಮುಸ್ಸಂಜೆಯ ಮಧುರವಾಗಿಸುವ ಪರಿ

ಅವರು ಅಪ್ಪನ ಚಡ್ಡಿ ದೋಸ್ತ್. ಅದೊಂದು ಕಾಲ್ ಇಡೀ ವಾತಾವರಣವನ್ನು ತಿಳಿಯಾಗಿಸಿತು. ಹೋದವರು ಹೋಗೇ ಬಿಟ್ಟರು. ಎಲ್ಲಿ ಹುಡುಕಿದರೂ ಸಿಗುವುದೂ ಇಲ್ಲ, ಹಿಂದಿರುಗಿ ಬರುವುದೂ ಇಲ್ಲ. ಆದರೆ ಇದ್ದವರು ಇನ್ನೂ ಇರಲೇ ಬೇಕಾದ ಅನಿವಾರ್ಯ. ತಮ್ಮ ಸಮಯ ಬರುವವರೆಗೆ… ಅದೂ ಇದ್ದಷ್ಟು ಕಾಲ ನೆಮ್ಮದಿಯಿಂದ ದಿನಗಳೆಯಬೇಕು ಎನಿಸಿ ಈ ರೀತಿ ಮಾಡಿದೆ. ಆದರೂ ಅಪ್ಪನ ಜೀವನೋತ್ಸಾಹ ಎಲ್ಲರಿಗೂ ಮಾದರಿಯಾಗುವಂತಿದೆ.
ಕಾವ್ಯಶ್ರೀ ಮಹಾಗಾಂವಕರ ಬರಹ ನಿಮ್ಮ ಓದಿಗೆ

Read More

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಊರು ಬಿಟ್ಟವರ ಹಾಡುಪಾಡು

ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್‌ ಪೊನ್ನಾಚಿ ಬರಹ

Read More

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

Read More

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ