Advertisement

Category: ಸಂಪಿಗೆ ಸ್ಪೆಷಲ್

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ