Advertisement

Category: ಸಂಪಿಗೆ ಸ್ಪೆಷಲ್

ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ

ಶತಮಾನಗಳ ಅವಧಿಯಲ್ಲಿ ಈ ಭಾಷಾಪಟ್ಟಿಯಲ್ಲಿರುವ ಕೆಲವಂತೂ ಒಂದಕ್ಕಿಂತ ಹೆಚ್ಚು ರಾಮನ ಕಥೆಗಳನ್ನು ಹೊಮ್ಮಿಸಿವೆ. ಸಂಸ್ಕೃತ ಒಂದರಲ್ಲೇ ಕಾವ್ಯ, ಪುರಾಣಗಳ ರೂಪದಲ್ಲಿ ಇಪ್ಪತ್ತೈದಕ್ಕಿಂತಲೂ ಹೆಚ್ಚು ರಾಮಕಥೆಗಳಿವೆ. ಶಾಸ್ತ್ರೀಯ ಮತ್ತು ಜಾನಪದೀಯ ನೆಲೆಗಳೆರಡರಲ್ಲೂ ನಾಟಕ, ನೃತ್ಯ-ನಾಟಕ ಮತ್ತು ಇತರ ರೂಪಗಳನ್ನು ಸೇರಿಸಿದರೆ ಅದರ ಸಂಖ್ಯೆ ಇನ್ನೂ ಹೆಚ್ಚು. ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಗಳಲ್ಲಿ ಇರುವ ಎಲ್ಲ ಶಿಲ್ಪ, ಉಬ್ಬುಶಿಲ್ಪ, ಮುಖವಾಡ, ನೆರಳಿನಾಟ, ಮತ್ತು ಚಕ್ಕಳಗೊಂಬೆ ಪ್ರದರ್ಶನಗಳನ್ನೂ ಸೇರಿಸಬೇಕು.
ಎ. ಕೆ. ರಾಮಾನುಜನ್ನರ ಸಂಶೋಧನಾ ಲೇಖನ ‘ಮುನ್ನೂರು ರಾಮಾಯಣಗಳು, ಐದು ಉದಾಹರಣೆಗಳು ಮತ್ತು ಅನು-ವಾದದ ಬಗೆಗಿನ ಮೂರು ಚಿಂತನೆಗಳು’ ಕುರಿತು ಸುಕನ್ಯಾ ಕನಾರಳ್ಳಿ ಬರಹ

Read More

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಸರ್ಕೀಟ್: ದಿಕ್ಕು ತೋಚದ ಬದುಕಿನ ಸಿಕ್ಕುಗಳು: ಶರೀಫ್ ಕಾಡುಮಠ ಬರಹ

ಒಂದು ಮಗುವಿನ ವರ್ತನೆ ಅಸಹಜವಾಗಿ ಕಾಣಿಸುವಂತೆ, ಪುಟ್ಟ ಹುಡುಗನೊಬ್ಬ ಈ ಪರಿ ನಟಿಸುವುದು ಖಂಡಿತ ಸಾಮಾನ್ಯ ಸಂಗತಿಯಲ್ಲ. ಚಿತ್ರದುದ್ದಕ್ಕೂ ಜೆಫ್ರನ್ ಎಷ್ಟು ತೀವ್ರವಾಗಿ ಕಾಡುತ್ತಾನೆ ಎಂದರೆ, ಆತನ ಚೇಷ್ಟೆ, ಅಕ್ವೇರಿಯಂ ಒಡೆದು ಹಾಕುವ ದೃಶ್ಯ, ಟ್ರೇ ಪೂರ್ತಿ ಮೊಟ್ಟೆ ಎತ್ತಿಕೊಂಡು ಹೋಗಿ ಟೆರೇಸ್ ಮೇಲೆ ಕೂತು ಹಾಯಾಗಿ ಕೆಳಗೆ ಎಸೆಯುವ ದೃಶ್ಯ, ತಾನಿಚ್ಛಿಸಿದ್ದು ಈ ಕ್ಷಣವೇ ಬೇಕು ಎಂದು ಬಿಡದೇ ಹಠ ಮಾಡಿ ಕೂಗಾಡುವ ದೃಶ್ಯ, ಅವನ ಮಿತಿಯಿಲ್ಲದ ತರಲೆಗಳೆಲ್ಲವೂ ನಮ್ಮ ಸಹನೆಯನ್ನೂ ಮೀರಿಸುವಷ್ಟು.
ಮಲಯಾಳಂನ “ಸರ್ಕೀಟ್‌” ಚಿತ್ರದ ಕುರಿತು ಶರೀಫ್‌ ಕಾಡುಮಠ ಬರಹ

Read More

‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಈ ಮೇಲು ಕೀಳುಗಳ ಕೀಲುಗೊಂಬೆ ಆಟದಲಿ ಜೊತೆಗಿದ್ದು ಬದುಕನ್ನು ಸಹ್ಯ ಮಾಡಿದ್ದಕ್ಕೆ ದಾರಿಯ ಪ್ರಯಾಣದ ಸಂಭ್ರಮವನ್ನು ಹೆಚ್ಚಿಸಿದ್ದಕ್ಕೆ ಯಾರಿಗೋ ಧನ್ಯವಾದ ಹೇಳಬೇಕು. ನನ್ನ ಅಹಂಗಳಲ್ಲಿ ಕುಳಿತು ಯಾರಿಗೋ ಚುಚ್ಚಿ ಮಾತಾಡಿದ್ದ ನೆನಪಾಗಿ ಸಾರಿ ಕೇಳಬೇಕು. ಸುಮ್ಮನೆ ಇಲ್ಲದ ಅವಸರವನ್ನು ಆರೋಪಿಸಿಕೊಂಡು ಬೇರುಗಳನ್ನು ಮರೆತಿದ್ದೇನೆ. ಹತ್ತಿರ ಕೂತು ಆ ಜೀವದ ಹೃದಯದ ಮಾತುಗಳನ್ನು ಕೇಳಿಸಿಕೊಳ್ಳುವುದಿತ್ತು. ಸಂಜೆಗಣ್ಣಿನ ನಿರೀಕ್ಷೆಯ ನೋಟದ ಅಪ್ಪ ಅಮ್ಮ ಇನ್ನೂ ಊರಿನ ಮನೆಯಲ್ಲಿದ್ದಾರೆ. ಹೇಗಾದರೂ ಮಾಡಿ ಈ ಸಲವಾದರೂ ಜೊತೆಗೆ ಕರೆದುಕೊಂಡು ಬರಬೇಕಿತ್ತು…
ಹೊಸ ವರ್ಷದ ಆಚರಣೆಯ ಈ ಹೊತ್ತಿಗೆ ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ