Advertisement

Category: ಸಂಪಿಗೆ ಸ್ಪೆಷಲ್

ಬಿಸಿಲ ನಾಡಿನಲ್ಲಿ ಹೆಕ್ಕಿದ ಕಾವ್ಯಸಾಲುಗಳು

“ವೈಶಾಖ ಮಾಸದ ಬೇಸಿಗೆಯ ಬಿರುಬಿಸಿಲಿನ ತಾಪಕ್ಕೆ ನೆಲ ಕಾದು ಕೆಂಪಾಗಿ, ಉತ್ತು ಬಿಟ್ಟಿದ್ದ ಹೊಲ ಗದ್ದೆಗಳ ಮಣ್ಣು ಧೂಳು ಧೂಳಾಗಿರುವಾಗ ಆಕಾಶದಲ್ಲಿ ಮೋಡ ಮಂದಯಿಸಿ ಕಪ್ಪು ಕಪ್ಪಾಗಿದೆ…. ಆಗ ತಂಗಾಳಿಯ ತೆರೆಯೊಂದು ದೂರದಿಂದ ಬಂದು ಬಡಿದಾಗ ನೆಲದೊಡಲಿಂದ ಕಂಪೊಂದು ಹೊಮ್ಮಿ ಬರುವುದರ ಜೊತೆಗೆ ಕವಿಯ ಮನಸೂ ಅರಳುತ್ತದೆ. ಈ ಕಾರಣವನ್ನು ಕೆಲವರು `ಕಾವ್ಯ ಎನ್ನುವುದು ಕವಿಯ ಕರ್ಮ’…”

Read More

ದೂರ ಅನ್ನುವ ಹತ್ತಿರ ಭಾವವಿದು…

ದೂರ ಎನ್ನುವ ಪದ ಕೆಲವರಿಗೆ ತುಂಬಾ ದೂರ, ಕೆಲವರ ಹೃದಯಕ್ಕೆ ತೀರಾ ಹತ್ತಿರ. ‘ದೂರ’ ಪದ ಕೇಳಿದಾಗಲೆಲ್ಲ ನಿಮಗೆ ಯಾವ ಭಾವ ಮೂಡುತ್ತದೋ ನಂಗೆ ಗೊತ್ತಿಲ್ಲ. ಆದರೆ ದೂರ ಎನ್ನುವುದು ನಿಮಗೆ ಹತ್ತಿರದಲ್ಲಿ ಕಾಣಿಸದಿದ್ದದ್ದನ್ನು ಕಾಣಿಸುವ ಬೈನಾಕ್ಯುಲರ್‌ನಂತೆ. ಹತ್ತಿರ ಇರುವಾಗ ಕಾಣಿಸದ್ದು ದೂರದಲ್ಲಿ ಬೇರೊಂದು ರೀತಿಯಲ್ಲೇ ಕಾಣಿಸುತ್ತದೆ. ನಂಗ್ಯಾಕೋ ದೂರ ಅನ್ನುವ ಪದ ತೀರಾ ಕಾಡುತ್ತಿರುವುದು ಆ ಒಂದು ಪದ ನನ್ನಲ್ಲಿ ಕುತೂಹಲ…”

Read More

ಅಮ್ಮ ಒಬ್ಬಳೇ ಕುಳಿತು ನೋಡುವ ಪತ್ತನಾಜೆಯ ಕಾಲ

ದೀಪಾವಳಿ ಸಂದರ್ಭದಲ್ಲಿ ತಿರುಗಾಟ ಆರಂಭಿಸುವ ಕರಾವಳಿಯ ಯಕ್ಷಗಾನ ಮೇಳಗಳು ವೃಷಭ ಮಾಸದ ಹನ್ನೊಂದನೇ ದಿನದಂದು ಅಂದರೆ ಮೇ ತಿಂಗಳಂತ್ಯದಲ್ಲಿ ಪ್ರದರ್ಶನ ಮುಕ್ತಾಯಗೊಳಿಸುತ್ತವೆ. ದೇವಸ್ಥಾನಗಳ ಆಶ್ರಯದಲ್ಲಿ ನಡೆಯುವ ಮೇಳಗಳ ಸಮಾರೋಪವು ಒಂದು ಪುಟ್ಟ ಜಾತ್ರೆಯಂತೆ ವೈಭವಯುತವಾಗಿ ಇರುತ್ತಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಆಚರಣೆಗಳಿಗೆ ಅವಕಾಶವಿಲ್ಲ. ಸಾಂಕೇತಿಕ ಆಚರಣೆಯ ಕುರಿತು…”

Read More

ಒಂದು ನೆಲನೆಲ್ಲಿಯ ಕತೆ

“ಸಂಸ್ಕರಿಸಿ ಪೊಟ್ಟಣವಾಗಿಸಿದ ಆಹಾರದಲ್ಲಿ ಒಪ್ಪಿತ ಮಟ್ಟದಲ್ಲಿ ಪ್ರಿಸರ್ವೇಟಿವ್, ಎಸ್ಸೆನ್ಸ್ ಅಥವಾ ರಾಸಾಯನಿಕ ಬಣ್ಣ ಇರುತ್ತದೆ. ಒಟ್ಟಿನಲ್ಲಿ ಹತ್ತಾರು ವಿಧಗಳಲ್ಲಿ ಇವುಗಳೆಲ್ಲ ನಮ್ಮ ದೇಹವನ್ನು ಸೇರಿ ಘಾಸಿ ಮಾಡುತ್ತವೆ ಎಂಬ ಅಧ್ಯಯನಗಳನ್ನು ಓದುತ್ತ ನಾವು ಜಾಗೃತರಾಗಬೇಕು ಎಂದುಕೊಳ್ಳುತ್ತೇವೆ. ಸಾವಯವ ಬದುಕನ್ನು ಬಾಳಬೇಕು ಎಂದುಕೊಳ್ಳುತ್ತೇವೆ. ಆದರೆ ಮತ್ತೊಂದೆಡೆ ಬಹಳ ಸೌಜನ್ಯ ಮತ್ತು ಸಭ್ಯತೆಯಿಂದಲೇ ನಾವು ಗಿಡಗಳ ಮೇಲೆ ದಾಳಿ ಮಾಡುತ್ತೇವೆ.”

Read More

ಜಾವಳಿ ನಾಟ್ಯಬಂಧದ ಅನಾವರಣ…

‘ಜಾವಳಿಯ ಪರಿಕಲ್ಪನೆಯು ಅಭಿನಯ ಪ್ರಧಾನವಾಗಿರುವುದಕ್ಕೆ ಇದೊಂದು ನಾಟ್ಯ ಬಂಧ. ಜಾವಳಿಯ ವಸ್ತು “ಶೃಂಗಾರ” ಮಧುರಭಾವ. ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಜಾವಳಿಗಳು ರಚಿತವಾಗಿವೆ. ಅವುಗಳ ವೈವಿಧ್ಯತೆಯೂ ರಮ್ಯಮನೋಹರವಾಗಿವೆ. ನೃತ್ಯಕ್ಷೇತ್ರದಲ್ಲಿ ಶೃಂಗಾರವೆಂದರೆ ಪರಿಪೂರ್ಣ ಅರ್ಪಣೆಯಲ್ಲದೆ ಮತ್ತೇನೂ ಅಲ್ಲ. ಅಷ್ಟೇ ಅಲ್ಲ. ನಾಯಕ-ನಾಯಕೀ ಭಾವವೇ ಜಾವಳಿಯ ಕೇಂದ್ರ ಬಿಂದು…’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ