Advertisement

Category: ಸರಣಿ

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

Read More

ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಒಂದು ಕಾಲಕ್ಕೆ ಭರ್ಜರಿ ಭತ್ತ ಬೆಳೆಯುತ್ತಿದ್ದ ಗದ್ದೆಗಳು ಈಗ ವಾಸದ ಮನೆಗಳಾಗಿವೆ. ತಿಳಿ ನೀರು ಹರಿಯುತ್ತಿದ್ದ ತೋಡು ಮನುಷ್ಯನ ಕೊಳಕು ಆ ತೋಡನ್ನು ಸೇರಿ ಸೇರಿಸಿಕೊಂಡು ಕಪ್ಪಗೆ ಹರಿಯುತ್ತಿದ್ದರೆ ಇದು ಮನುಷ್ಯನ ನಾಗರೀಕತೆಯ ಹಂಬಲದ ಮುಖವಾಣಿ ಅನ್ನಿಸುತ್ತದೆ. ಒಟ್ಟು ನಮ್ಮೂರು ಮಡಿಕೇರಿ ಅಲ್ಲ ಮಡಿಯಾದಕೇರಿ ಈಗ ನಗರೀಕರಣಕ್ಕೆ ಒಳಗುಗೊಳ್ಳುವ ಹಂಬಲದಲ್ಲಿ ಮೂಲ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ.
ಸುಮಾವೀಣಾ ಬರೆಯುವ ಮಡಿಕೇರಿಯಲ್ಲಿ‌ ಕಳೆದ ಬಾಲ್ಯದ‌ ನೆನಪುಗಳ ಸರಣಿ “ಕೊಡಗಿನ ವರ್ಷಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ