Advertisement

Category: ಸರಣಿ

ಮಳೆಯಲಿ…ಚಳಿಯಲಿ…ಕಾಫಿ ಜೊತೆಯಲಿ: ಸುಮಾವೀಣಾ ಸರಣಿ

ಮಲೆನಾಡಲ್ಲಿ ಇರುವವರೆಗೂ ನಮಗೆ ಇವುಗಳಲ್ಲಿ ಕಾಫಿ ಕುಡಿದು ಅಭ್ಯಾಸವಿರಲಿಲ್ಲ. ಮಗ್‌ಗಳಲ್ಲಿ ಕುಡಿದು ಅಭ್ಯಾಸ. ಸ್ಟ್ರಾಂಗ್ ಕಾಫಿಯನ್ನಲ್ಲ ಲೈಟ್ ಕಾಫಿಯನ್ನು. ಬೈಟು ಕಾಫಿ, ಬೈ ತ್ರಿ ಕಾಫಿ ಪದಗಳನ್ನು ಮಲೆನಾಡು ಬಿಟ್ಟಮೇಲೆ ನಾನು ಪರಿಚಯಿಸಿಕೊಂಡದ್ದು. ಮನುಷ್ಯನ ಆಲೋಚನಾ ರೀತಿಯನ್ನು, ಅನುಭವಿಸುವ ತಳಮಳವನ್ನು, ಮನಸ್ಥಿತಿಯನ್ನು ಅವರವರು ಕಾಫಿ ಕಪ್ ಹಿಡಿಯುವ ಬಗೆ, ಅದನ್ನು ಸೇವಿಸುವ ಬಗೆ ಇತ್ಯಾದಿಗಳಲ್ಲಿ ಅವರ ಅಧ್ಯಯನ ಮಾಡಬಹುದು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ʻಕೆರೆಯಂ ಕಟ್ಟಿಸು ಬಾವಿಯಂ ಸವೆಸುʼ: ಚಂದ್ರಮತಿ ಸೋಂದಾ ಸರಣಿ

ಗದ್ದೆಯ ಕೆಲಸ ಮಾಡಿ ದಣಿದ ಎತ್ತುಗಳು ಒಮ್ಮೆ ಕೆರೆಯಲ್ಲಿ ಈಜಾಡಿ ಬಂದರೆ ದಣಿವೆಲ್ಲ ಮಾಯ. ಮೇಯಲು ಬಿಟ್ಟ ದನಗಳು ಕೆರೆಯಲ್ಲಿ ನೀರು ಕುಡಿದೇ ಮನೆಕಡೆ ಮುಖಮಾಡುತ್ತಿದ್ದವು. ಇನ್ನು ಬೇಸಿಗೆ ಕಾಲದಲ್ಲಿ ಕೆರೆಯಲ್ಲಿ ಝಾಂಡಾ ಹೊಡೆದಿರುವ ಎಮ್ಮೆಗಳನ್ನು ಕೆರೆಯಿಂದ ಎಬ್ಬಿಸುವುದೇ ಕಷ್ಟದ ಕೆಲಸ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎಂಟನೆಯ ಕಂತು

Read More

‘ಬೌದ್ಧಿಕ’ ಕವಿತೆಗಳ ಕವಿ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

‘ಬೌದ್ಧಿಕ’ ಕವನಗಳಿಗೆ ವ್ಯತಿರಿಕ್ತವಾಗಿರುವ ಹಲವಾರು ‘ಮುಗ್ಧ’ ಕವನಗಳು ಟ್ಯಾಲ್ವೆಟ್‌ರ ಸಂಕಲನದಲ್ಲಿ ಇವೆ. ಈ ‘ಮುಗ್ಧ’ ಕವನಗಳು ಎಸ್ಟೋನಿಯನ್ ಜಾನಪದ ಕಾವ್ಯದಲ್ಲಿ ಅವರ ಆಳವಾದ ಮತ್ತು ಸಕ್ರಿಯ ಆಸಕ್ತಿಯಲ್ಲಿ ಹುಟ್ಟಿದ ಕಾವ್ಯ. ಎಸ್ಟೋನಿಯನ್ ಕಾವ್ಯದ ಬೆಳವಣಿಗೆಗೆ ಜಾನಪದ ಕಾವ್ಯದ ಪಾತ್ರ ಮಹತ್ವದ್ದಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಎಸ್ಟೋನಿಯಾ ದೇಶದ ಕವಿ ಯೂರಿ ಟ್ಯಾಲ್ವೆಟ್-ರ (Jüri Talvet) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ

ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಕೊಡಗಿನ ಮೋಹಕ ಆಭರಣಗಳು: ಸುಮಾವೀಣಾ ಸರಣಿ

ದಕ್ಷಿಣ ಕಾಶ್ಮೀರವೆಂದು ಕರೆಸಿಕೊಂಡಿರುವ ಕೊಡಗು ಪ್ರಕೃತಿ ಸೊಬಗಿಗೆ ಇನ್ನೊಂದು ಹೆಸರು. ಪ್ರಕೃತಿ, ಸೌಂದರ್ಯ, ಶೌರ್ಯವನ್ನು ಸಂಕೇತಿಸುವ ಅಷ್ಟೇ ಮನೋಲ್ಲಾಸವನ್ನು ನೀಡುವ ಕೊಡವರ ಆಭರಣಗಳ ವಿನ್ಯಾಸವೂ ಅನನ್ಯವಾಗಿರುತ್ತದೆ. ಕೊಡವರು ವಿಶೇಷವಾಗಿ ಗುರುತಿಸಿಕೊಂಡಿರುವುದು ವಿಶೇಷ ವಿನ್ಯಾಸದ ಸೀರೆ ಉಡುಗೆ ಮತ್ತು ಅನುರೂಪದ ಆಭರಣಗಳ ತೊಡುಗೆಯಿಂದ. ಇವರ ಪತ್ತಾಕ್, ಜೋಮಾಲೆ, ಕೊಕ್ಕೆತಾತಿ, ಹವಳದ ಸರ, ಕೈಪಡಚ, ಕಾಲ್ಪಿಲ್ಲಿ, ಜೋಡಿ ಕಡಗ, ಒಂಟಿ ಕಡಗ, ಪೀಚೆಕತ್ತಿ ಇವುಗಳು ಪ್ರಕೃತಿಯಿಂದ ಸ್ಫೂರ್ತಿ ಪಡೆದವೆ ಆಗಿವೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ