ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ
ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ
