Advertisement

Category: ಸರಣಿ

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ