Advertisement

Category: ಸರಣಿ

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ