Advertisement

Category: ಸರಣಿ

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

ಲಂಡನ್ನಿನ ಸ್ಮರಣೆಯಲ್ಲಿ ದೇಶಭಕ್ತ ತಾತ್ವಿಕರು…

ನ್ಯಾಯಾಂಗ ಹೋರಾಟದ ಸೋಲು ತಿಲಕರ ಖ್ಯಾತಿಯನ್ನು ವರ್ಚಸ್ಸನ್ನು ಹೆಚ್ಚಿಸಿತ್ತು. ದಂತಕತೆಯಾಗಿದ್ದ ಪ್ರಸಿದ್ಧ ಪತ್ರಿಕೋದ್ಯಮಿ ಬೆಂಜಮಿನ್ ಹಾರ್ನಿಮನ್ ಸಂಪಾದಕತ್ವದ “ಬಾಂಬೆ ಕ್ರೋನಿಕಲ್” ಪತ್ರಿಕೆ “ಬ್ರಿಟಿಷ್ ಜ್ಯೂರಿ ಮತ್ತು ನ್ಯಾಯಾಧೀಶರು ಲೋಕಮಾನ್ಯ ತಿಲಕರ ಬಗ್ಗೆ ಹೇಳಿದುದನ್ನು ಯಾರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ? ಜನರ ಪ್ರೀತಿಯ ಹೃದಯಸಿಂಹಾಸನದಿಂದ ತಿಲಕರನ್ನು ಕೆಳಗಿಳಿಸುವಲ್ಲಿ ಕೋರ್ಟಿನ ನಿರ್ಣಯಗಳೆಲ್ಲ ನಿರರ್ಥಕ” ಎಂದು ಬರೆದಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯ ಕೊನೆಯ ಕಂತಿನಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ