Advertisement

Category: ಸರಣಿ

ಗಂಟಲೊಳಗಿನ ನಾಣ್ಯ ಮತ್ತು ಆಸೆಯ ಕಣ್ಣು

ಹಟ್ಟಿಯ ಅಂಗಳಕ್ಕೆ ಬಂದವನೆ ಸಡನ್ನಾಗಿ ನಿಂತುಕೊಂಡೆ. ಅಪ್ಪ ಎದುರಿಗೆ ನಿಂತಿದ್ದಾನೆ. ಭೀಮನ ಗದೆಯಂತ ಕೋಲು ಹಿಡಿದು ತೇಪೆಯ ಅಂಗಿಯ ತೊಟ್ಟು.. ಸಿಟ್ಟಿಗೆ ಮುಖ ನಡುಗುತ್ತಿದೆ… ಕೈಯಲ್ಲಿನ ಕೋಲು ಕುಣಿಯುತ್ತಿದೆ. ನನಗೆ ಎಲ್ಲವೂ ಅರ್ಥವಾಗಿತ್ತು. ಅಪ್ಪನಿಗೆ ನಾನು ಹಣ ತೆಗೆದುಕೊಂಡಿದ್ದು ಗೊತ್ತಾಗಿದೆ. ಪಕ್ಕದಲ್ಲಿ ಅಕ್ಕ ನಿಂತಿದ್ದಳು. ಅವಳ ಮುಖದಲ್ಲಿ ನಗು ನೋಡಿ ಅರ್ಥವಾಯಿತು. ಓ.. ನಾನು ಬೆಳಿಗ್ಗೆ ತೆಗೆದುಕೊಳ್ಳುವಾಗ ಇವಳು ನೋಡಿರಬೇಕು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ಸಾವಿನ ನೋವು…

ಈ ದಾರುಣ ಸಾವಿನ ಪ್ರಕರಣದ ನಂತರ ಸುಮಾರು ದಿವಸ ನಮಗೆ ಇಡೀ ಪ್ರಪಂಚ ಖಾಲಿ ಖಾಲಿ ಅನಿಸಿತ್ತು. ಈ ಹುಡುಗರ ಸಂಪರ್ಕ ಹೆಚ್ಚಿದ್ದ ಮನೆಯವರ ಪಾಡು ಯಾರಿಗೂ ಬೇಡ. ಮಕ್ಕಳನ್ನು ಈ ದುಃಖದ ಮಡುವಿನಿಂದ ಆಚೆ ಸೆಳೆಯಲು ಕೆಲವರು ಅವರ ಮಕ್ಕಳು ಮತ್ತು ಅವರ ಸ್ನೇಹಿತರನ್ನು ದೂರದ ಊರಿಗೆ ಕಳಿಸಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಾಲ್ಕನೇ ಕಂತು ನಿಮ್ಮ ಓದಿಗೆ

Read More

ಪ್ರಬಂಧಕಾರನಿಗೆ ಉಪದೇಶಾಮೃತ

ಪ್ರಾಮಾಣಿಕವಾದದ್ದಾಗಲೀ, ಯಥೋಚಿತವಾದದ್ದಾಗಲೀ, ದುರುದ್ದೇಶಪೂರ್ವಕವಾದದ್ದಾಗಲೀ ಉಪದೇಶವೆಂಬುದು ಉಪದೇಶವೇ! ಈ ಜಗತ್ತಿನಲ್ಲಿ ಉಪದೇಶಗಳಿಂದ ಆಗಿರುವಷ್ಟು ಹಾವಳಿ ಇನ್ನು ಯಾವುದರಿಂದಲೂ ಆಗಿಲ್ಲ. ಎಲ್ಲ ಬಣ್ಣದ, ಎಲ್ಲ ನೆರಳಿನ, ಎಲ್ಲ ಧರ್ಮದ, ಎಲ್ಲ ವಿತಂಡವಾದದ ಸಕಲ ರೀತಿಯ ಆಧ್ಯಾತ್ಮಿಕ, ಸಾಂಸ್ಕೃತಿಕ ಉಪದೇಶಗಳಿಂದ ಈ ಜಗತ್ತು ನಲುಗಿ ನಲುಗಿ ಬಸವಳಿದುಹೋಗಿದೆ. ಈಗಾಗಲೇ ಸತ್ಯವನ್ನು ಕಂಡಾಗಿದೆ, ಹೇಳಿಯೂ ಆಗಿದೆ ಎಂಬ ಬಾಲಿಶ ಧೋರಣೆಯಿಂದ ಕೊನೆಗೂ ನಾನು ಒಂದು ಮಾತು ಹೇಳುತ್ತೇನೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಕೊನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಲ್ಲಿದ್ದಾನೆ… ನೀರಿನಲ್ಲಿ ಹೆಸರು ಕೆತ್ತಲಾದವನು

ಸಹೋದರನನ್ನು ಕಳೆದುಕೊಂಡ ಶೋಕ ದುಮ್ಮಾನ ಒಂದು ಕಡೆ, ಹೊಸ ಸ್ನೇಹ ಪ್ರೇಮಾಂಕುರಗಳ ಜೀವಸೆಲೆ ಇನ್ನೊಂದೆಡೆ, ಅವನ ಕವಿತೆಗಳು ಆ ಇಡೀ ವರ್ಷ ನೋವು ನಲಿವುಗಳ, ಖಿನ್ನತೆ ಉತ್ಸಾಹಗಳ ಉಯ್ಯಾಲೆಯಲ್ಲಿ ತೂಗಿ ತೇಲಿದವು. ವಾಸ್ತವದಲ್ಲಿ ಹರುಷ ಹಾಗು ವ್ಯಥೆಗಳು ಜೊತೆಜೊತೆಗೆ ಬದುಕಿ ಸಾಗುವುದನ್ನು ಪ್ರದರ್ಶಿಸಿದವು. ಬೇರೆಬೇರೆ ವಸ್ತುಗಳ ಪದ್ಯಗಳನ್ನು ಬೇರೆಬೇರೆ ಛಂಧಸ್ಸಿನಲ್ಲಿ ಬರೆಯುವ ಕೌಶಲ ಆತನಿಗಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕವಿ ಜಾನ್‌ ಕೀಟ್ಸ್‌ ಕುರಿತ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ