Advertisement

Category: ಸರಣಿ

ವರ್ಷಕಾಲದಲ್ಲಿ ಸಂಭ್ರಮಾಚರಣೆಯ ಸಂಕಷ್ಟಗಳು: ಸುಮಾವೀಣಾ ಸರಣಿ

ನಮ್ಮ ಟೀಚರ್ಸ್ ಡೇ ಸೆಲೆಬ್ರೇಷನ್ನಿಗೂ ಮಳೆರಾಯ ತಪ್ಪದೆ ಹಾಜರಿ ಹಾಕುತ್ತಿದ್ದ. ಯಾವಾಗಲು ಸೆಪ್ಟೆಂಬರ್ 4 ರ ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿರುತ್ತಿತ್ತು. ಕಾರ್ಯಕ್ರಮ ಪ್ರಾರಂಭವಾಗಿ ಸ್ವಾಗತ ಉದ್ಘಾಟನೆ ಮೊದಲಾದ ಔಪಚಾರಿಕ ಕಾರ್ಯಕ್ರಮ ಮುಗಿದು ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುವ ಹೊತ್ತಿಗೆ ಹಾಡು ಕೇಳದಷ್ಟು ಜೋರು ಮಳೆ. ಮುಸಿ ಮುಸಿ ನಗುತ್ತಾ ಬರೆ ಡಾನ್ಸ್ ನೋಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಋಣಾನುಬಂಧದ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಆತ ಆಗಾಗ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದ. ಸುಮ್ಮನೆ ಊಟಮಾಡಬೇಕಲ್ಲ ಎಂಬ ಸ್ವಾಭಿಮಾನದ ಧೋರಣೆ ಆತನದ್ದಿರಬೇಕು. ಮನೆಯಲ್ಲಿ ಮಲಗು ಎಂದು ಎಷ್ಟು ಹೇಳಿದರೂ ಆತ ಕಿರಾಣಿ ಅಂಗಡಿಯ ಬಾಗಿಲ ಮುಂದೆಯೇ ಮಲಗುತ್ತಿದ್ದ. ಯಾಕೆಂದು ನಮಗೂ ತಿಳಿಯಲಿಲ್ಲ. ಅಡಿಗೆ ಆದಮೇಲೆ ನಾನೆ ತೆಗೆದುಕೊಂಡು ಹೋಗಿ ಕೊಡುತಿದ್ದೆ. ಊಟ ಮಾಡುತ್ತಿದ್ದ. ಮಾತಿಗಿಂತ ಮೌನವೆ ಹೆಚ್ಚು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ವಿಭಿನ್ನ ಲೋಕಗಳಲ್ಲಿ ಸಂಚರಿಸುವ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಸೂಮೆತ್ಸ್‌ರ ಅಡಕಮಾತಿನ, ನಿಖರವಾದ ಕವನ ರಚಿಸುವ ವಿಧಾನವನ್ನು ಗಮನಿಸಿ, ತ್ರೀನ್ ಸೂಮೆತ್ಸ್‌ರು ಒಂದು ತರಹದ ಕರಾಳವಾದ ‘ಸೈಕೊಗ್ರಾಫಿಕ್’ (psychographic) ಬರವಣಿಗೆ ಶೈಲಿಯನ್ನು ಹೊಂದಿದ್ದಾರೆ ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಅವರದ್ದು ಮಿತಭಾಷೆಯ ಕಾವ್ಯವಾದ್ದರಿಂದ ಅವರ ಕಾವ್ಯವನ್ನು ಸಾಂಕೇತಿಕ ಭಾಷೆಯಿಂದ ಸಾಮಾನ್ಯ ಭಾಷೆಗೆ ತಂದು ಓದಬೇಕಾಗುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಎಸ್ಟೋನಿಯಾ ದೇಶದ ಕವಿ ತ್ರೀನ್ ಸೂಮೆತ್ಸ್ (Triin Soomets) ಅವರ ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ