Advertisement

Category: ಸರಣಿ

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಉಗಿಬಂಡಿ ಯುಗದ ಫಾರ್ಸಿ ಇಂಜಿನಿಯರ್

ಲಂಡನ್‌ನಲ್ಲಿ ಮೊದಲ ಬಾರಿ ಕಳೆದದ್ದು ಒಂದು ವರ್ಷವಾದರೂ, ಉತ್ಸಾಹ ಪ್ರತಿಭೆ ಕೌಶಲಗಳಿಂದ ಬ್ರಿಟಿಷ್‌ ತಂತ್ರಜ್ಞರ ಗಮನ ಸೆಳೆದು, ಇಂಜಿನೀಯರುಗಳ ಸಮುದಾಯದಲ್ಲಿ ಅರ್ದೆಶೀರ್ ಪರಿಚಯ ಹೆಚ್ಚಿತು. ರಾಣಿ ವಿಕ್ಟೋರಿಯಾಳನ್ನು ಭೇಟಿ ಆಗುವ ಅವಕಾಶ ಒದಗಿಸಿತು. ಪ್ರಭಾವಿ ಪರಿಚಯಗಳೇ ಇನ್ಸ್ಟಿಟ್ಯೂಷನ್ ಆಫ್ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗಲೂ ಕಾರಣ ಆಯಿತು.
ಯೋಗೀಂದ್ರ ಮರವಂತೆ ಬರೆಯುವ ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿ

Read More

ಬದುಕು ಒಂದು; ಭಾವ ನೂರು

ಇಷ್ಟೆಲ್ಲ ರೂಢಿಗತವಾಗಿರುವ ರೀತಿಯಲ್ಲಿ ಚಿತ್ರದ ಚಲನೆ ಇದ್ದರೂ ನಿರ್ದೇಶಕನ ಆಶಯಕ್ಕೆ ತಕ್ಕ ರೀತಿಯಲ್ಲಿ ನಮ್ಮನ್ನು ಆವರಿಸಿ ಒಳಗೊಳ್ಳುವಂತೆ ಸಾಧ್ಯವಾಗುವುದರಲ್ಲಿ ಚಿತ್ರಕಥೆಯಷ್ಟೇ ಪ್ರಮುಖ ಕೊಡುಗೆ, ದೃಶ್ಯಗಳಲ್ಲಿ `ಅಭಿನಯ’ ಎನ್ನಬಹುದಾದ ನೂರಕ್ಕೆ ನೂರರಷ್ಟು ಸಹಜತೆಯನ್ನು ಮೇಳವಿಸಿಕೊಂಡ ನಟರ ಆಂಗಿಕ ವರ್ತನೆ ಮತ್ತು ಭಾವ ಪ್ರಕಟಣೆಗಳದ್ದು. ಇದರಿಂದಾಗಿ ಅಗತ್ಯವಿರುವಲ್ಲಿ ಭಾವತೀವ್ರತೆ ವ್ಯಕ್ತವಾಗುತ್ತದೆಯೇ ಹೊರತು ಭಾವಾವೇಶವಲ್ಲ. ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಸರಣಿʼ

Read More

ಜಾತಿ-ಧರ್ಮಗಳ ನಡುವೆ ಭೇದವಿಲ್ಲದ ಕಾಲದಲ್ಲಿ….

ಅವರು ನನ್ನ ಹೆಸರು ಕೇಳಿದರು. ತಮ್ಮ ಬಗ್ಗೆ ತಿಳಿಸಿದರು. ಅವರು ಬೆಳಗಾವಿ ಕಡೆಯವರು. ಜಮೀನುದಾರರು. ನನ್ನ ಹೆಸರು ಕೇಳಿದರು. ನನ್ನ ‘ಜಾಣತನ’ಕ್ಕೆ ಅವರು ಮೆಚ್ಚಿಕೊಂಡಿದ್ದರು. ತಮಗೆ ಮಕ್ಕಳಿಲ್ಲವೆಂದೂ ನನಗೆ ದತ್ತು ತೆಗೆದುಕೊಳ್ಳುವುದಾಗಿಯೂ ತಿಳಿಸಿದರು. ನನ್ನ ಅಭಿಪ್ರಾಯ ಕೇಳಿದರು. ನಾನು ಒಪ್ಪಿದೆ. (ಅವರಿಗಾಗಲಿ ನನಗಾಗಲಿ ಹಿಂದೂ ಮುಸ್ಲಿಂ ಎಂಬ ಭಾವವೇ ಇರಲಿಲ್ಲ.) ಹಾಗಾದರೆ ನಿಮ್ಮ ಮನೆಯ ವಿಳಾಸ ಹೇಳು ಎಂದಾಗ ಹೇಳಿದೆ. ಅವರು ತಮ್ಮ ಪುಟ್ಟ ಡೈರಿಯಲ್ಲಿ ಬರೆದುಕೊಂಡರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ