Advertisement

Category: ಸರಣಿ

ಸದಾ ಸ್ವಾಭಿನಂದನೆಯ ಯುಗ

ನಮ್ಮನ್ನು ನಾವೇ ಅಭಿನಂದಿಸಿಕೊಳ್ಳುತ್ತಿರುವುದು, ಹೊಗಳಿಕೊಳ್ಳುತ್ತಿರುವುದು ಇವೇ ನಮ್ಮ ನಿತ್ಯದ, ಕ್ಷಣಕ್ಷಣದ ದಂದುಗವಾಗಿದೆ. ಅಂದರೆ ನಾವು ನಮ್ಮನ್ನು ಅಭಿನಂದಿಸಿಕೊಂಡು ಬೆಚ್ಚಗೆ ಸುಖಪಡುತ್ತಾ ಮನೆಯೊಳಗೆ ಕುಳಿತಿರುತ್ತೇವೆಂದು ಅರ್ಥವಲ್ಲ. ಇನ್ನೊಬ್ಬರು, ಅಂದರೆ, ನಮ್ಮನ್ನು ಬಲ್ಲವರೆಲ್ಲರೂ ನಮ್ಮನ್ನು ಯಾವಾಗಲೂ ಅಭಿನಂದಿಸುತ್ತಲೇ ಸಾಧ್ಯವಾಗುವಂತಹ ಸುಲಭವಾಗುವಂತಹ ಅವಕಾಶಗಳನ್ನು ನಾವೇ ಸೃಷ್ಟಿಸುತ್ತಾ ಹೋಗುತ್ತೇವೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಐದನೆಯ ಪ್ರಬಂಧ ನಿಮ್ಮ ಓದಿಗೆ

Read More

ಮೆಳ್ಳಿಗೇರಿ ಸರ್‌ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!

ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಬದುಕೇ ಒಂದು ಓಟದ ಸ್ಪರ್ಧೆ…

ಚಿತ್ರಕ್ಕೆ ನಮ್ಮ ಪ್ರವೇಶ, ಗಡಿಯಾರವನ್ನು ತಲೆಯ ಮೇಲಿಟ್ಟುಕೊಂಡಿದ್ದ ಮರದ ಮುಖದ ಅಷ್ಟಾವಕ್ರ ಪ್ರಾಣಿ ಬಾಯಿ ತೆರೆದು ಉಂಟಾದ ಕತ್ತಲೆಯಲ್ಲಿ ಕ್ಯಾಮೆರಾ ಜೂ಼ಮ್-ಇನ್ ಮಾಡುವ ಮೂಲಕ. ಆಗ ಎದುರಾಗುತ್ತದೆ ಒಂದಕ್ಕೊಂದು ಸಂಬಂಧ ಮತ್ತು ಸಾತತ್ಯವಿರದ ಪ್ರಶ್ನೆ ಮತ್ತು ಉತ್ತರಗಳನ್ನು ಹುಡುಕಾಡುವುದೇ ಮನುಷ್ಯನ ಬದುಕು ಎನ್ನುವುದನ್ನು ಟಿ. ಎಸ್. ಎಲಿಯಟ್ ಮತ್ತು ಹೆರ್‌ಬರ್ಗರ್ ಅವರಿಂದ ಉದ್ಧರಿಸಿದ ಸಾಲುಗಳು ಮೂಡಿ, ಅಡ್ಡಾದಿಡ್ಡಿ ಓಡೋಡುತ್ತಲಿರುವ ಜನಜಂಗುಳಿ ಮರೆಯಾಗುತ್ತಿದ್ದಂತೆ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ, ಟೆಲಿಫೋನ್ ಬೂತಿನಲ್ಲಿ ಮಾನಿ ಲೋಲಾಗೆ ಮಾತಾಡುವ ದೃಶ್ಯದಲ್ಲಿ ಘಟನೆಯ ಮೂಲಕ್ಕೆ ಪರಿಚಿತಗೊಳ್ಳುತ್ತೇವೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ