Advertisement

Category: ಸರಣಿ

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಅವಳಿ ನಗರಗಳ ದರ್ಶನ: ದರ್ಶನ್‌ ಜಯಣ್ಣ ಸರಣಿ

ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗಳ ಹಿಂದೆ ಇಲ್ಲಿದ್ದ ಸಮುದ್ರದಿಂದ ರೂಪುಗೊಂಡಿರುವುದಾಗಿಯೂ ಅದರ ಒಳಮೈಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಇರುವುದಾಗಿಯೂ ಅಲ್ಲಿನ ಗೈಡ್ ನಮಗೆ ಹೇಳಿದರು. ಅದರ ಎತ್ತರ ಆಕೃತಿ ನಮ್ಮ ಶಿರಸಿಯ ಯಾಣದಂತಿದೆಯಾದರೂ ಒಂದು ಲಾವಾದ ಪರಿಣಾಮದಿಂದ ಮತ್ತೊಂದು ಮರಳುಗಾಡಿನಲ್ಲಿ ಯಾವಾಗಲೋ ಬಿದ್ದ ಬೀಳುತ್ತಿದ್ದ ಮಳೆಯಿಂದ ಆಗಿರಬಹುದೆಂದು ನಂತರ ನಾನು ತಿಳಿದುಕೊಂಡೆ.

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ