Advertisement

Category: ಸರಣಿ

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಇಲ್ಲಿ ಉಳಿದರು ಹೀಗೆ ನಡೆದರು ಅಂಬೇಡ್ಕರ್

ಗಾಂಧೀಜಿ ಹಳ್ಳಿಗಳನ್ನು ಭಾರತದ ಬೆನ್ನೆಲುಬು, ನಾಗರಿಕತೆಯ ತೊಟ್ಟಿಲು ಎಂದು ವೈಭವೀಕರಿಸಿದರೆ ಅಂಬೇಡ್ಕರರಿಗೆ ಅವು ಜಾತ್ಯಾಧಾರಿತ ತಾರತಮ್ಯವನ್ನು ಸ್ಥಿರಗೊಳಿಸಿ ಆಳುವ ಕೂಪಗಳಾಗಿ ಕಾಣುತ್ತಿದ್ದವು. ಒಡಹುಟ್ಟಿದವರಿಗೆ ಸೇವೆಗಳು ನಿರ್ಬಂಧಿಸಲಾದ, ಕೆಲವು ಜಾತಿಗಳವರನ್ನು ಹೀನರೆಂದು ತಿಳಿಯುವ ಹಳ್ಳಿಯಲ್ಲಿ ಅವರು ವಾಸಿಸಿದವರು. ಪಟ್ಟಣಗಳು ಅವಕಾಶಗಳನ್ನು ಒದಗಿಸುವ, ಶಿಕ್ಷಣಕ್ಕೆ ಉತ್ತೇಜನ ನೀಡುವ ಜಾತಿಯನ್ನು ಆಧರಿಸದೇ ಉದ್ಯೋಗ ಬದುಕು ನೀಡುವ ತಾಣಗಳಾಗಿ ಕಂಡಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ