Advertisement

Category: ಸರಣಿ

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ನಾನೇಕೆ ಜಾತಿವಾದಿಯಲ್ಲ?

ನಾವೆಲ್ಲರೂ ಮನುಷ್ಯರೇ ತಾನೆ? ಈವತ್ತು ಸಮತೋಲಿತ ಮನಸ್ಸಿನಿಂದ ಕೂಡಿರುವವನು ಮುಂದೆ ಜಾತಿವಾದಿಯಾಗಬಹುದು. ಅಂತಹ ಪ್ರಲೋಭನೆ, ಒತ್ತಡಗಳು ಬರಬಹುದು. ಅಥವಾ ನಾವೇ ಅದನ್ನೆಲ್ಲ ಸೃಷ್ಟಿಸಿಕೊಂಡು ಈಗ ನಾನೇನು ಮಾಡಲಿ ಎಂದು ಅಸಹಾಯಕತೆ ನಟಿಸಿ ಜಾತಿವಾದಿಯಾಗಬಹುದು. ನಮ್ಮ ಆಪ್ತರೇ ಬಹಿರಂಗದಲ್ಲಿ ಸಮಾನಭಾವದವರಾಗಿದ್ದು, ಒಳಗಡೆ ತಮ್ಮ ಜಾತಿಯ ಬಗ್ಗೆ ಅನುಕೂಲವಾಗಿ ಭಾವಿಸುತ್ತಿರಬಹುದು, ನಡೆದುಕೊಳ್ಳುತ್ತಿರಬಹುದು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಏಳನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ