Advertisement

Category: ಸರಣಿ

ʻದ ಡಿಪಾರ್ಟೆಡ್ʼ: ಕ್ರೈಮ್‌ ಕಥನದ ಅಂತರ್ಮುಖಿ ಪಯಣ

ಕಾಲಿನ್ ಸಲ್ಲಿವನ್ ಎಂಬ ಯುವ ಕ್ರಿಮಿನಲ್ ಪೊಲೀಸ್ ಇಲಾಖೆಯ ಒಳಗೆ ನುಸುಳಿಕೊಂಡು ಅಲ್ಲಿನ ಎಲ್ಲ ವಿದ್ಯಮಾನಗಳನ್ನು ಗ್ಯಾಂಗ್‌ ಲೀಡರ್‌ ಗೆ ರವಾನಿಸುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಇದು ಕಥನದ ಪ್ರಾರಂಭಿಕ ಭಾಗವಾದರೆ ಚಿತ್ರ ಮುಂದುವರಿದಂತೆ ಅವರು ತಮ್ಮ ನಿಯೋಜಿತ ಕೆಲಸಗಳಲ್ಲಿ
ತೊಡಗುತ್ತಾರೆ. ಇದರಲ್ಲಿ ನಿರತರಾದಾಗ ಬಿಲ್ಲಿ ಕಾಸ್ಟಿಗನ್‌ ಮತ್ತು ಕಾಲಿನ್‌ ಸಲ್ಲಿವನ್‌ ಅಂತರಂಗದಲ್ಲಿ ಸಂಭವಿಸುವ ಸಂಘರ್ಷದ ಪದರುಗಳನ್ನು ಪ್ರಕಟಿಸುವುದೇ ನಿರ್ದೇಶಕನ ಉದ್ದೇಶ. ಇಂಥದನ್ನು ಪ್ರಕಟಿಸುವ ಏಕಾಂತ ಕ್ಷಣಗಳಲ್ಲಿ ಪಾತ್ರಗಳ ಅಭಿನಯ ಪರಿಣಾಮಕಾರಿ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಅಮೆರಿಕದ ʻದ ಡಿಪಾರ್ಟೆಡ್ʼ ಸಿನಿಮಾದ ವಿಶ್ಲೇಷಣೆ

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ಒಳಗುದಿಯ ದೀಪ ಉರಿಯುತಿತ್ತು

ಆಗ ನನಗೆ ಒಂದು ಸುಂದರ ಹವ್ಯಾಸ ಇತ್ತು. ಈಗಲೂ ಅದನ್ನು ಬಿಟ್ಟಿಲ್ಲ… ಹಳೆಯ ಹಿಂದಿ ಸಿನಿಮಾ ಹಾಡುಗಳನ್ನು ಕೇಳುತ್ತಲೇ ಇರುವುದು… ಆ ಮುಖೇಶ್, ರಫೀ, ಸೈಗಲ್, ಕಿಶೋರ್ ಕುಮಾರ್, ಲತಾ ಅವರ ಕೊನೆ ಮೊದಲಿಲ್ಲದ ಹಾಡುಗಳ ನನ್ನ ಪೂರ್ವಿಕರಿಗೆಲ್ಲ ಕೇಳಿಸಬೇಕು ಎಂಬಂತೆ ಸುಪ್ತ ಪ್ರಜ್ಞೆಯಲ್ಲಿ ಮಲಗಿದ್ದ ಅವರನ್ನೆಲ್ಲ ಎಬ್ಬಿಸಿ ಈ ಹಾಡನ್ನು ಕೇಳಿ… ಈ ಅನಂತ ಹಿಂದೂಸ್ತಾನಿ ಸಂಗೀತದ ಸಮುದ್ರದ ಅಲೆಯ ರಾಗಗಳ ಆಲಿಸಿ ಎನ್ನುತ್ತಿದ್ದೆ. ನನ್ನ ಅಳಲನ್ನು ಈ ಸಂಗೀತಗಾರರು ಅದೆಷ್ಟು ಸಲ ಸಂತೈಸಿದ್ದಾರೊ ಏನೊ..ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆಯ 33ನೇ ಕಂತು

Read More

ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್‌ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್‌ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ

Read More

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ