Advertisement

Category: ಸರಣಿ

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

Read More

ದೂರ ದೂರ ಹೋದರೆ…

ನಾಯಕಿ ನೇಯ್ಗೆ ಮಾಡಿದ ಕೆಂಪು ವಸ್ತ್ರವನ್ನು ಶಾಲಾ ಕಟ್ಟಡದಲ್ಲಿ ಕಟ್ಟಲಾಗುತ್ತದೆ. ಈ ಎಲ್ಲ ಘಟನೆಗಳು ಜರುಗಿದರೂ ಒಮ್ಮೆಯೂ ನಾಯಕ-ನಾಯಕಿಯರ ಮುಖಾಮುಖಿಯಾಗಿರುವುದಿಲ್ಲ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವುದರಿಂದ ಉಂಟಾಗುವ ಕಲರವವನ್ನು ಮನೆಯಲ್ಲಿರುವ ನಾಯಕಿ ತನ್ನಜ್ಜಿಯ ಜೊತೆಗೆ ಕೇಳಿಸಿಕೊಳ್ಳುತ್ತ ತನ್ನಷ್ಟಕ್ಕೆ ಸಂಭ್ರಮಿಸುತ್ತಾಳೆ. ಶಿಕ್ಷಕ ನಾಯಕನಿಗೆ ಪ್ರತಿದಿನ ಮಕ್ಕಳ ಜೊತೆ ಊರಾಚೆ ಓಡಾಡುವುದು ವಾಡಿಕೆ. ಅವನು ಹೀಗೆ ಮಾಡುವುದನ್ನು ನಿರೀಕ್ಷೆಯಿಂದ ಕಾಯುವ ಆತಂಕ, ಲಜ್ಜೆ ಸಂತೋಷ ಇವುಗಳನ್ನು ಒಳಗೊಂಡ ನಾಯಕಿಗೆ ನಾಯಕನ ಪ್ರಥಮ ಭೇಟಿಯಾಗುತ್ತದೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ