Advertisement

Category: ಸರಣಿ

ಮೂಕ ನಾಯಕನ ದೇಶ ಯಾವುದು

ರಾಘವೇಂದ್ರಾಯ ನಮಃ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ್ದ ನಮಗೆ ಒಂದಿಷ್ಟು ನಯ ವಿನಯ ಪ್ಯಾಂಟಸಿ ರಮ್ಯತೆ ಇತ್ತು. ನಾವಾಗಿ ನಾವು ‘ದಲಿತ’ ರೂಪಿಸಿದಾಗ ಅಗ್ನಿ ಪರ್ವತದಂತೆ ಮನದೊಳಗೆ ಲಾವಾ ಕುದಿಯುತ್ತಿತ್ತು. ಆ ಮಳವಳ್ಳಿ ಪೈಲ್ವಾನನೂ ಬ್ಲೇಡೇಟಿನ ಚಿಕ್ಕಣ್ಣನೂ ನಮ್ಮ ಬೆನ್ನು ತಟ್ಟಿದ್ದರು. ಬೋರ್ಡಿಗೆ ಹಚ್ಚಿದ ಸಾಯಂಕಾಲದ ಒಳಗೆ ತರಾವರಿ ಕೀಳು ಬಯ್ಗಳಗಳು ಅದೇ ದಲಿತ ಪತ್ರಿಕೆಯ ಮೂಲೆಗಳಲ್ಲೆಲ್ಲ ದಾಖಲಾಗುತ್ತಿದ್ದವು. ಅವನ್ನೆಲ್ಲ ಇಲ್ಲಿ ದಾಖಲಿಸಲಾಗದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

Read More

ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಜೀವಂತಿಕೆಯಿಂದ ತುಂಬಿ ತುಳುಕುತ್ತಿದ್ದ ಸೊಹೊ ಪ್ರದೇಶ, ಅಪಾಯಕಾರಿ ಅನಾರೋಗ್ಯಕರ ಸ್ಥಳವೂ ಆಗಿತ್ತು. ಸರಾಸರಿ ಹದಿನಾಲ್ಕು ಜನರು ಒಂದೇ ಮನೆಯಲ್ಲಿ ವಾಸಿಸುವಂತಹ ಜನಸಂದಣಿ, ಬಡತನದ ಬೀಡಾಗಿತ್ತು. ಕಾಯಿಲೆಗಳ ಗೂಡಾಗಿತ್ತು. ೧೮೫೪ರಲ್ಲಿ ಈ ಪ್ರದೇಶ ಕಾಲರಾ ಬಾಧೆಯಿಂದ ಬಳಲಿತು. ಸರಿಯಾದ ಕೆಲಸವಿಲ್ಲದ, ಹಣದ ನಿರ್ವಣೆಯಲ್ಲಿ ಚತುರನಲ್ಲದ ಮಾರ್ಕ್ಸ್ ನಿರಂತರವಾಗಿ ಗೆಳೆಯರ ಕೊಡುಗೆಯಲ್ಲಿ ಜೀವನ ಸಾಗಿಸುತ್ತಿದ್ದ. ಆಪ್ತನಾದ ಎಂಗೆಲ್ಸ್, ಬೇಕರಿ, ಹಾಲು, ತರಕಾರಿ, ಚಹಾ ಅಂಗಡಿಯವರ ಬಳಿ ಮಾರ್ಕ್ಸ್ ಮಾಡಿದ ಸಾಲವನ್ನು ತೀರಿಸುತ್ತಿದ್ದ.
ಯೋಗೀಂದ್ರ ಮರವಂತೆ ಬರೆಯುವ ಸರಣಿ

Read More

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ

ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ.  ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ

Read More

ಕತೆಗಳನ್ನು ಕೇಳುತ್ತ ಅರಳುವ ಅವರ ಕಂಗಳು

ಹಿಂದಿನ ದಿನ ಹೇಳಿದ ಕಥೆಯ ಸಣ್ಣ ಸಣ್ಣ ಸಂಗತಿಗಳನ್ನೂ ನೆನಪಿಟ್ಟುಕೊಂಡು ಒಬ್ಬರು ಇನ್ನೊಬ್ಬರಿಗೆ ಹೀಗೆ ಮಾಡು ಎಂದು ನಿರ್ದೇಶನ ಮಾಡುತ್ತಾ ಪಾತ್ರಗಳಾಗಿ ಅಭಿನಯಿಸುವ ಆಟ ಬಹಳ ಸೊಗಸಾಗಿ ನಡೆದಿತ್ತು. ಅವರಲ್ಲಿ ಮೂವರು ಐದು ವರ್ಷ ಆಸುಪಾಸಿನ ಮಕ್ಕಳು. ಅವರಿಗಿನ್ನೂ ಶಾಲೆಯಲ್ಲಿ ಕಲಿಸುವ ಅಕ್ಷರಾಭ್ಯಾಸವೇ ಆಗಿಲ್ಲ. ಆದರೂ ಕಥೆಯನ್ನು ಸೂಕ್ಷ್ಮವಾಗಿ ಕೇಳಿಸಿಕೊಳ್ಳುವ, ಮತ್ತೆ ಅಲ್ಲಿ ಸಂದರ್ಭಕ್ಕೆ ಬೇಕಾದ ಸಂಭಾಷಣೆಯನ್ನು ತಾವೇ ಸೃಷ್ಟಿಸಿಕೊಳ್ಳುವ ಕೌಶಲ ಅವರಿಗಿತ್ತು.
ಅರವಿಂದ ಕುಡ್ಲ ಇಂದಿನ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ