Advertisement

Category: ಸರಣಿ

ಹೋಮ್‌ವರ್ಕ್‌ ಎಂದರೇನು?: ಅನುಸೂಯ ಯತೀಶ್ ಸರಣಿ

ಆ ಮೂವರು ಮಕ್ಕಳು ನಮ್ಮ ಶಾಲೆಯಲ್ಲಿ ಹೋಮ್ ವರ್ಕ್ ಮಾಡದೇ ಬರುವ ಶುದ್ಧ ಸೋಂಬೇರಿಗಳು. ಇವರದು ಮುಗಿಯದ ಅನುದಿನದ ಕಥೆ. ಅವರನ್ನ ನಿತ್ಯ ಹೀಗೆ ಕಾರಣಗಳನ್ನು ಹುಡುಕಿ ವಹಿಸಿಕೊಳ್ಳುತ್ತಾ ಮಕ್ಕಳ ಭವಿಷ್ಯಕ್ಕೆ ಕಲ್ಲು ಹಾಕುತ್ತಿರುವ ವ್ಯಾಮೋಹಿ ಅಮ್ಮಂದಿರು ಅವರು ಎಂದರು. ಈ ಮಾತು ಕೇಳಿ ನನ್ನ ಕೈಗೆ ಸಿಕ್ಕಂತಾಗಿದ್ದ ಆಕಾಶ ತಲೆ ಮೇಲೆ ಅಪ್ಪಳಿಸಿದಂತಾಯಿತು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಸೈಕಲ್‌ನಿಂದ ಮೋಟಾರ್ ಸೈಕಲ್‌ಗೆ ಸಿಕ್ಕ ಪ್ರಮೋಷನ್: ಮಾರುತಿ ಗೋಪಿಕುಂಟೆ

ರಜಾ ದಿನಗಳಲ್ಲಿ ಊಟ ಮಾಡುತ್ತಿದ್ದುದೆ ಕಡಿಮೆ. ಒಮ್ಮೊಮ್ಮೆ ಇದೇ ಕಾರಣಕ್ಕೆ ಏಟುಗಳು ಬೀಳುತ್ತಿದ್ದವು. ನಾನು ಅದರಲ್ಲಿ ಸೈಕಲ್ ಚಕ್ರವನ್ನು ದಾನ ಮಾಡುತ್ತಿದ್ದೆ. ಇದಕ್ಕೆ ಕಾರಣವು ಇತ್ತು. ಪಕ್ಕದ ಬರಗೂರು ನಮ್ಮಮ್ಮನ ತವರು ಮನೆಯಾದ್ದರಿಂದ ನಮ್ಮ ಮಾವ ಬಳಸಿ ಬಿಸಾಡಿದ ಚಕ್ರಗಳನ್ನು ಸುಲಭವಾಗಿ ತಂದುಕೊಡುತ್ತಿದ್ದ. ಒಂದೊಂದ್ಸಾರಿ ನಮ್ಮ ಚಿಕ್ಕಪ್ಪನೂ ತಂದುಕೊಟ್ಟಿದ್ದು ಉಂಟು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಸೂರ್ಯಕಾಂತಿಯ ಕವಿತೆಗಳು…: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಬ್ರುಂಡ್‌ಜಾಯಿಟೆ ಅವರ ಕಾವ್ಯದ ಪ್ರಮುಖ ಹಾಗೂ ಆಕರ್ಷಕ ಗುಣವೆಂದರೆ ಅವರು ಚಿತ್ರಿಸುವ ಪ್ರಪಂಚದ ಪ್ರಾಮಾಣಿಕತೆ ಮತ್ತು ಗೀತಾತ್ಮಕ ವಿಷಯದ ಸತ್ಯತೆ ಮತ್ತು ಶ್ರದ್ಧೆ. ಇಲ್ಲಿ ಮುಖವಾಡ ಧರಿಸುವ ಅಥವಾ ಅಲಂಕಾರಿಕ ಸರಸೋಕ್ತಿಗಳನ್ನು ಬಳಸುವ ಮತ್ತು ಅನಗತ್ಯವಾಗಿ ಚತುರರಾಗುವ ಯಾವುದೇ ಪ್ರಯತ್ನವಿಲ್ಲ. ಬ್ರುಂಡ್‌ಜಾಯಿಟೆ ಭಾಷೆ ಮತ್ತು ಇತರರ ಕೃತಿಗಳ ಉಲ್ಲೇಖಗಳೊಂದಿಗೆ ಶಬ್ದವಾಟವಾಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ