Advertisement

Category: ಸರಣಿ

ದೌರ್ಬಲ್ಯಗಳಿಲ್ಲದ ಸ್ವಾಭಿಮಾನಿ ನನ್ನಪ್ಪನೇ ನನಗೆ ಮಾದರಿ

ಅಂದು ನನ್ನ ತಂದೆ ಸಂಭ್ರಮಿಸಿದ್ದು ಒಂದು ರೂಪಕವಾಗಿ ಮನದಲ್ಲಿ ಉಳಿದಿದೆ. ಅವರೆಲ್ಲ ಚೂಡಾ ತಿಂದ ಮೇಲೆ ಲಿಂಗಾಯತರಾದ ಶಿವಪ್ಪನವರಿಗೆ ಸಮೀಪದ ಲಿಂಗಾಯತರ ಮನೆಯಿಂದ ನೀರು ತಂದು ಕೊಟ್ಟ ನಂತರ ಅವರು ನೀರು ಕುಡಿದರು! ಆದರೆ ತಾಯಿ ಮಾಡಿಕೊಟ್ಟ ಚಹಾವನ್ನು ಎಲ್ಲರ ಜೊತೆ ಶಿವಪ್ಪ ಅವರೂ ಕುಡಿದರು. ಇದೆಲ್ಲ ನನಗೆ ವಿಚಿತ್ರ ಎನಿಸಿತು. ಅದೇ ನಳದ ನೀರು. ಲಿಂಗಾಯತರ ಮನೆಗೆ ಹೊಕ್ಕಾಗ ಅದು ಹೇಗೆ ಶುದ್ಧವಾಗುವುದು? ಆ ‘ಶುದ್ಧ’ ನೀರನ್ನು ನನ್ನ ತಂದೆ ತರುವಾಗ ಅಶುದ್ಧವಾಗುವುದಿಲ್ಲವೆ?

Read More

ಬೆನ್ನುಬಿದ್ದ ಭೂತ ಇವನು!

ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಮೊಗಳ್ಳಿ ಆತ್ಮ ಕಥಾನಕದ ಮೊದಲ ಕಂತು

ನನ್ನ ಅಪ್ಪ ಕ್ರೂರವಾಗಿದ್ದರು. ಬರ್ಬರತೆಯ ಪ್ರಚಂಡ ವ್ಯಕ್ತಿಯಾಗಿದ್ದರು.  ಅವರ ಹಂಗಿನಲ್ಲಿದ್ದರು ಕೇರಿಯ ಜನರೆಲ್ಲ. ಬಹಳವೇ ಪಾಳೇಗಾರಿಕೆ ಮಾಡುತ್ತಿದ್ದರಿಂದ, ಅವರನ್ನು ನೋಡಿದಾಗ ಒಂದು ರೀತಿಯ ಭಯವೂ ಆವರಿಸಿದಂತೆ ಅನಿಸುತ್ತಿತ್ತು. ಅವರ ಕುರಿತು ಬರೆಯುವ ನೆಪದಲ್ಲಿ ನಾನು ನನ್ನ ಪೂರ್ವಿಕರನ್ನೆಲ್ಲ ತುಂಬಿಕೊಂಡು ಹೀಗೊಂದು ಆತ್ಮಕತೆಯನ್ನು ಬರೆಯಲು ಹೊರಟಿದ್ದೇನೆ.

Read More

ಎದೆಯಲ್ಲಿ ಅವಲಕ್ಕಿ ಕುಟ್ಟಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ…

ವಾರವೆಲ್ಲ ಕೆಲಸವಿಲ್ಲದೆ ಬಿಟ್ಟಿ ಊಟ ತಿಂದುಕೊಂಡು ವಾಹನ ದಟ್ಟಣೆಯ ತುಮಕೂರಿನಲ್ಲಿ ಓಡಾಡಿದ್ದು ಮನಸ್ಸಿಗೆ ಹಿಡಿಸದಾಗಿ ಮಂಕು ಕವಿಯತೊಡಗಿತು. ಆ ಮಂಕಿನೊಳಗೆ ಊರಿನ ನೆನಪುಗಳು ಬಾದಿಸತೊಡಗಿದವು. ಪರಿಣಾಮವಾಗಿ ದುಡಿಯದಿದ್ದರೂ ಸರಿಯೆ ಊರು ಹೋಗೆನ್ನುವಂತೆಯೂ ಕಾಡು ಬಾ ಎನ್ನುವಂತೆಯೂ ಕರೆದಂತಾಯಿತು. ಇದಕ್ಕೆ ಒತ್ತುಕೊಡುವಂತೆ ಎಸ್‌ಎಸ್‌ಎಲ್‌ಸಿ ಫಲಿತಾಂಶದ…

Read More

ಐಬಿಲ್ಲದ ಕೊಲೆ ಯಾವುದೂ ಇಲ್ಲಾ..

 ರೈಲು ಹಳಿಯ ಮೇಲಿದ್ದ ಗೋಣಿ ಚೀಲದಲ್ಲಿನ ಶವ ಮಮ್ಮಿಫೈಡ್ ಸ್ಥಿತಿಯಲ್ಲಿತ್ತು. ತೆರೆದು ನೋಡುವಾಗ ಶರೀರದಲ್ಲಿ ಯಾವ ವಾಸನೆಯು ಕೂಡ ಇರಲಿಲ್ಲ. ಶರೀರದಲ್ಲಿ ಅಲ್ಲಲ್ಲಿ ಒಣಗಿದ ಮರಳು ಸಿಕ್ಕಿಕೊಂಡಿದ್ದು, ಶರೀರವನ್ನು ಕೆಲವು ದಿನಪತ್ರಿಕೆಗಳಿಂದ ಸುತ್ತಲಾಗಿತ್ತು. ಎಲ್ಲಾ ಬಿಡಿಸಿ ನೋಡುವಾಗ ಶವವು ಸಾಧಾರಣ ನಲವತ್ತರಿಂದ ಐವತ್ತು ವರ್ಷದ ಒಳಗಿನ ಒಬ್ಬ ಗಂಡಸಿನ ಶರೀರವಾಗಿತ್ತು. ಮೈಯ ಮೇಲೆ ಪೈಜಾಮ ಮತ್ತು ಕಮರಿ ಆಂಗ್ರಖಾ ಎನ್ನುವ ಬಟ್ಟೆಗಳು ಇದ್ದವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ