Advertisement

Category: ಸರಣಿ

ಒಂದು ಬೊಗಸೆ ನೀರಿಗೆ ಹರಸಾಹಸ

ಮುಗಿಲೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನಮರಗಳು ರಾತ್ರಿ ಉಚ್ಚೆ ಉಯ್ಯಲು ಹೊರ ಬಂದು ನೋಡಿದಾಗ ದೆವ್ವದಂತೆ ಕಾಣುತ್ತಿದ್ದವು. ಹಾಸ್ಟೆಲ್ ಹುಡುಗರು ಸಂಜೆ ಸ್ಕೂಲಿಂದ ಬಂದರೆಂದರೆ ಗುರಿ ಇಟ್ಟು ಕಲ್ಲು ಬೀಸಿ ತೆಂಗಿನ ಕಾಯಿ ಉದುರಿಸುತ್ತಿದ್ದರು. ಪ್ರತಿನಿತ್ಯ ಒಂದೆರಡು ತೆಂಗಿನ ಕಾಯಿ ಕಿತ್ತು ಚೂಪಾದ ಕಲ್ಲಿನಿಂದ ಮತ್ತು ಹಲ್ಲಿನಿಂದ ಸಿಪ್ಪೆ ಸಿಗಿದು ಕಾಯಿ ಕೆಚ್ಚಿ ಪಚಿಡಿ ಮಾಡಿ ತಿನ್ನುತ್ತಿದ್ದೆವು. ತೋಟದ ಮಾಲೀಕರಿಗೆ ಗೊತ್ತಾದರೆ ದೊಣ್ಣೆಯೊಂದಿಗೆ ಓಡಿಸಿಕೊಂಡು ಬರುತ್ತಿದ್ದರು. ಅವರ ಹತ್ತಿರ ಬಂದೂಕು ಇದೆ, ಅವರು ನಿರ್ದಯಿಗಳು, ಕಳ್ಳತನ ಮಾಡಿದರೆ ಗುಂಡು ಹಾರಿಸಿ ಸುಟ್ಟು ಬಿಡುತ್ತಾರೆಂದು…”

Read More

ಮೂಕ ರಮೇಶಿಗೆ ತಾಗಿದ ಹಠಾತ್ ಸಾವು

ರಮೇಶಿಯ ಹೊಲಿಗೆ ನೈಪುಣ್ಯದ ಬಗೆಗೆ ಎರಡು ಮಾತಿಲ್ಲ. ಕಾಲಿಂಚೂ ಆಚೀಚೆ ಆಗದ ಅಳತೆಯ ಸ್ಪಷ್ಟತೆ,  ಚೂಡಿದಾರ ಹಾಗೂ ರವಿಕೆಗಳಿಗೆ, ತಾನೇ ಹುಡುಕಿಕೊಂಡು ಇಡುತ್ತಿದ್ದ ಹೊಸಾ ಹೊಸಾ ಕತ್ತಿನ ಡಿಸೈನುಗಳು, ತನ್ನ ಮೂಗಭಾಷೆಯಲ್ಲೇ ನಮಗೆಲ್ಲಾ ವಿವರಿಸಿ ಹೇಳಿ ಹೊಲೆಯುತ್ತಿದ್ದ ಹೊಸ ಶೈಲಿಗಳ ಬಟ್ಟೆಗಳು, ಬೇಡಬೇಡವೆಂದರೂ ಅವನೇ ಉಪಚಾರದ ಸಂಜ್ಞೆಗಳನ್ನು ಮಾಡಿ ತೊಡುವಂತೆ ಮಾಡುತ್ತಿದ್ದ ಡೀಪ್ ನೆಕ್ ಹಾಗೂ ಸಣ್ಣ ತೋಳಿನ ಬಟ್ಟೆಗಳು… ಇವೆಲ್ಲಾ ಹೆಂಗಸರನ್ನು ಉನ್ಮಾದಗೊಳಿಸುತ್ತಿದ್ದವು.
ಮಧುರಾಣಿ ಬರೆಯುವ ‘ಮಠದಕೇರಿ ಕಥಾನಕ’

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ಹಸಿವಿನ ವಿಕಾರದ ಮುಂದೆ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿ?

ಕರೀಂ ಸಾಹೇಬರ ಮನೆಯಿಂದ ಇದಿನಬ್ಬ ಓಡಿ ಬಂದಿದ್ದ. ಓಡಿ ಓಡಿ ದಣಿವಾಗಿ ಒಂದೆಡೆ ಕುಳಿತಾಗಲೇ ಅವನಿಗೆ ಹಸಿವಿನ ನೆನಪಾಯಿತು. ಜೊತೆಗೆ ಮನೆಯವರ ನೆನಪೂ ಕಾಡತೊಡಗಿತು. ಭಯಂಕರ ಕ್ಷಾಮವು ಆ ಊರನ್ನು ಅಡರಿಕೊಂಡಿದ್ದರಿಂದ, ತಿನ್ನಲು, ಕುಡಿಯಲು ಏನೂ ಸಿಗುತ್ತಿರಲಿಲ್ಲ. ಹಸಿವಿನ ಹಿಂಸೆ ರುದ್ರನರ್ತನ ಮಾಡುತ್ತಿತ್ತು. ಇದಿನಬ್ಬ ಮೊದಲ ಬಾರಿಗೆ ತನ್ನನ್ನೇ ತಾನು ಮಾರಿಕೊಳ್ಳಲು ನಿರ್ಧರಿಸಿದ. ಮತ್ತೊಂದು ಮಾಲೀಕತ್ವವು ಇದಿನಬ್ಬನನ್ನು ಎಲ್ಲಿಗೆ ಕರೆದೊಯ್ದಿತು ?
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಏಳನೇ ಕಂತು ಇಲ್ಲಿದೆ.

Read More

ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು ತಟ್ಟೆ’ ಸರಣಿ ಇಂದಿನಿಂದ ಶುರು

ಹಾಸ್ಟೆಲ್ ಜೀವನವೆಂದರೆ ಬದುಕನ್ನು ಸ್ವಯಂ ಅನ್ವೇಷಿಸುವ ಮೊದಲ ಹೆಜ್ಜೆಯಂತೆ. ಸಮವಯಸ್ಕರ ಜೊತೆಗೆ ಬದುಕುವ ಅವಕಾಶ ಸಿಗುವುದರಿಂದ ಅಲ್ಲಿನ ನೋವು ನಲಿವುಗಳೊಡನೆ ನವಿರು ಭಾವವೊಂದು ಸೇರಿಕೊಂಡಿರುತ್ತದೆ. ಕಥೆಗಾರ ಗುರುಪ್ರಸಾದ್ ಕಂಟಲಗೆರೆ ತೀರಾ ಎಳವೆಯಲ್ಲಿಯೇ ಹಾಸ್ಟೆಲ್ ಬದುಕನ್ನು ಕಂಡವರು. ಆ ನೆನಪುಗಳನ್ನು ಅವರು ಪ್ರತಿವಾರ ‘ಟ್ರಂಕು ತಟ್ಟೆ’ ಎಂಬ ಸರಣಿಯಲ್ಲಿ ಬರೆಯಲಿದ್ದಾರೆ. ಈ ಬರಹಗಳು ಅಕ್ಷರಗಳನ್ನು ಮೀರಿದ ಕಥೆಯೊಂದನ್ನು ಹೇಳುತ್ತವೆಯೆನಿಸುತ್ತದೆ. ಮೊದಲ ಬರಹ ನಿಮ್ಮ ಓದಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ