ಮದುವೆ, ಮಜಾ ಹಾಗೂ ಮೂವತ್ತು ದಾಟಿದ ಜವ್ವನಿಗರು
ಸಂತಿಯೇನೂ ತಾನು ಮದುವೆಯಾಗಲ್ಲ ಎಂದವನಲ್ಲ, ಆದರೆ ಕೇರಿಯೊಳಗೆ ಇನ್ನೇನು ನಾಳೆಯೋ ನಾಡಿದ್ದೋ ಬಿದ್ದು ಹೋಗುವುದೆಂಬಷ್ಟು ಹಳೆಯ ಮನೆಯೊಂದನ್ನು ಬಿಟ್ಟು ಯಾವುದೇ ಆಸ್ತಿಪಾಸ್ತಿ ಇಲ್ಲದ, ನೋಡಲು ತೊಳೆದ ಕೆಂಡದಂತೆ ಮುಟ್ಟಿದರೆ ಕೈಗೆ ಹತ್ತುವಷ್ಟು ಕಪ್ಪುಬಣ್ಣಕ್ಕಿದ್ದ. ಸಂತಿಗೆ ಸರಿಯಾದ ಕೆಲಸವೂ ಇರಲಿಲ್ಲವಲ್ಲಾ.. ಹೀಗೆ ಎಲ್ಲದರಲ್ಲೂ ನಪಾಸಾದ ಸಂತಿಯ ಕರ್ಮಕ್ಕೆ ಕಲಶವಿಟ್ಟಂತೆ ನಕ್ಕರೆ ಮುಂದಿದ್ದವರಿಗೆ ಚುಚ್ಚುವಷ್ಟು ಉಬ್ಬುಹಲ್ಲು ಬೇರೆ!
ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ
