Advertisement

Category: ಸರಣಿ

ಬಾವೋಬಾಬ್ ಗುಲಾಬ್ ಸೆನೆಗಲ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಪ್ಪತ್ತನೇ ಶತಮಾನದ ಕೊನೆಯಲ್ಲಿ ಬರ ಬಂದದ್ದರಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿತ್ತು. ಮಾಲಿ ಪ್ರದೇಶದ ಮನಾಂತಲಿ ಅಣೆಕಟ್ಟಿನ ನೀರನ್ನು ಬಳಸಿಕೊಂಡ ಕಾರಣ ಈ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಣೆಯಾಯಿತು. ಸೆನೆಗಲ್‌ನ ಹವಾಮಾನ ಜಾನುವಾರುಗಳ ಸಾಕಣೆಗೆ ಪೂರಕವಾಗಿದೆ. ಸವನ್ನಾ ವಿಧದ ಸಸ್ಯವರ್ಗ ಇರುವುದರಿಂದಾಗಿ ಜಾನುವಾರುಗಳ ಆಹಾರಕ್ಕೆ ಯಾವುದೇ ತೊಂದರೆಯಿಲ್ಲ. ದನ, ಮೇಕೆ, ಕುರಿ, ಕುದುರೆ, ಒಂಟೆ, ಕತ್ತೆ, ಹಂದಿ ಮೊದಲಾದ ಪ್ರಾಣಿಗಳನ್ನು ಸಾಕುತ್ತಾರೆ ಸೆನೆಗಲ್ ಜನರು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸೆನೆಗಲ್ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಸೌದಿಯ ಹೊಸ ಮೆಗಾ ಪ್ರಾಜೆಕ್ಟ್‌!: ದರ್ಶನ್‌ ಜಯಣ್ಣ ಸರಣಿ

ಆತ “ದುಬೈ ನಲ್ಲಿ ಏನಿದೆ? ಒಂದು ಐದಾರು ಶಾಪಿಂಗ್ ಮಾಲ್‌ಗಳು, ಎರಡು ಮುಖ್ಯ ರಸ್ತೆ, ಎರಡು ಹೋಟೆಲ್ಲು ಮತ್ತು ಬಹು ಮಹಡಿ ಕಟ್ಟಡ ಅಷ್ಟೇ ತಾನೇ?! ನಮ್ಮದು ಅದಕ್ಕಿಂತ ದೊಡ್ಡ ಯೋಜನೆ ಮತ್ತು ಹತ್ತು ಪಟ್ಟು ಹಿರಿದಾದದ್ದು” ಎಂದುಬಿಟ್ಟ. ಪ್ರಶ್ನೆ ಕೇಳುತ್ತಿದ್ದವರು ಕಕ್ಕಾ ಬಿಕ್ಕಿ. ಈ ಉತ್ತರ ಕೆಲವು egoistic ಸೌದಿಗಳಿಗೆ ಅಪ್ಯಾಯವಾಗಬಹುದು; ಆದರೆ ಒಂದು ವಿಷಯ ಗಮನದಲ್ಲಿಟ್ಟುಕೊಳ್ಳಬೇಕು. ದುಬೈ ನಗರ ಅಥವಾ ಯುಎಇ ದೇಶ ಈ ಎಲ್ಲವನ್ನೂ 50 ವರ್ಷ ಮುಂಚಿತವಾಗಿ ಮಾಡಿ ಗೆದ್ದಿದೆ. ಆಗಲೇ ಅವರ ದೃಷ್ಟಿಕೋನ ಹಾಗಿತ್ತು ಎಂಬುದನ್ನು ಯಾರೂ ಮರೆಯಬಾರದು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಬರಹ

Read More

ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

ಏನೇ ಹೇಳಿ, ಆ ಕಾಡು ಮಧ್ಯದ ಪುಟ್ಟ ಶಾಲೆಯಲ್ಲಿ ಓದುವಾಗಿನ ಆ ನೆನಪುಗಳು ನಿಜಕ್ಕೂ ಚಿರಸ್ಮರಣೀಯ. ನಮ್ಮನೆಯಿಂದ ಶಾಲೆ ಸುಮಾರು ಎರಡು ಕಿ.ಮೀ. ನಷ್ಟು ದೂರವಿತ್ತು. ಎರಡು ಸೊಪ್ಪಿನ ಬೆಟ್ಟ ದಾಟಿ, ಒಂದು ಗುಡ್ಡ ಏರಿಳಿದರೆ, ನಮ್ಮ ಶಾಲೆ. ಮಳೆಗಾಲದಲ್ಲಿ ಒಂದು ಪುಟ್ಟ ಕಾಲುವೆ ದಾಟಬೇಕಾಗುತ್ತಿತ್ತು. ಹೆಚ್ಚು ಕಮ್ಮಿ ಮಾರಗಲವಿದ್ದ ಆ ಕಾಲುವೆ, ಅಂಥ ಭಯಂಕರ ಕಾಲುವೆಯೇನೂ ಆಗಿರಲಿಲ್ಲ. ಅದೂ ಕೂಡಾ ನಮ್ಮ ಬಾಲ್ಯದ ಸಂಗಾತಿಯಂತೇ ನಮ್ಮ ಖುಶಿಯಲ್ಲಿ ಪಾಲು ಪಡೆದಿತ್ತು.
ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

Read More

ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ