Advertisement

Category: ಸರಣಿ

ರುಕ್ಮಣಮ್ಮಜ್ಜಿಯ ನೆನಪುಗಳು….: ಸುಮಾ ಸತೀಶ್ ಸರಣಿ

ಅಂಗಡೀಗೇ ಮಾರಾಕೆ ಮಾತ್ರ ನಮ್ಮಜ್ಜೀ ತಿಂಡೀಗ್ಳು ಮೀಸ್ಲಲ್ಲ. ಮಾರಾಕಿಂತ ರವಷ್ಟು ಜಾಸ್ತೀನೆ ದಾನ ಮಾಡ್ತಿತ್ತು. ಒಂದು ಬೇಸನ್ ತಿಂಡಿ ಮಾರಾಕಿಟ್ರೆ, ಎಲ್ಡು ಬೇಸನ್ ಅವ್ರಿವ್ರಿಗೆ ಕೊಡೋಕೇ ಸಾಲ್ತಿರ್ಲಿಲ್ಲ. ಆದ್ರೂ ಒಲೆ ಮುಂದೆ ಕುಂತ್ಕಣಾಕೆ ಎಂದ್ರೂ ಬ್ಯಾಸ್ರ ಪಟ್ಟಿದ್ದಿಲ್ಲ. ಪಕ್ಕದ್ ಮನ್ಯಾಗಿದ್ದ ವಾರ್ಗಿತ್ತೀಗೆ ಮನೆ ತುಂಬಾ ಮಕ್ಳು. ಅದ್ರಾಗೂ ಸಾಲಾಗಿ ಒಂಬತ್ತು ಹೆಣ್ಣುಮಕ್ಕಳು. ಅದ್ಕೇಯಾ ತಿಂಡೀ ತೀರ್ಥದಾಗೆ ಕೈ ಬಿಗಿ ಮಾಡ್ತಿದ್ರು. ನಮ್ಮಜ್ಜೀ ಜೀವ ನಿಲ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಅಜ್ಜಿ ರುಕ್ಮಣ್ಣಮ್ಮನವರ ಕುರಿತು ಬರೆದಿದ್ದಾರೆ

Read More

ಅನ್ನ, ನೀರಿಗೇಕೆ ಅನಾದರ ತೋರುವಿರಿ?: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನಪತ್ರಿಕೆಯಲ್ಲಿ ಪ್ರಕಟವಾದ ಮಾಹಿತಿಯೊಂದರ ಪ್ರಕಾರ 2019 ರಲ್ಲಿ ಜಗತ್ತಿನಾದ್ಯಂತ 93.1 ಕೋಟಿ ಟನ್‌ನಷ್ಟು ಆಹಾರ ಪೋಲಾಗಿದೆ! ಇದೇ ವರ್ಷ 69 ಕೋಟಿ ಜನರು ಆಹಾರದ ಕೊರತೆ ಎದುರಿಸಿದ್ದಾರೆ!! ಇದರಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣವೇ ಹೆಚ್ಚು ಎಂಬ ವರದಿಯಿದೆ. ಭಾರತದಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣ ವಾರ್ಷಿಕ ತಲಾವಾರು 50 ಕೆಜಿಯಷ್ಟು ಎಂದು ಅಂದಾಜಿಸಲಾಗಿದೆಯಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ

ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ

Read More

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ