Advertisement

Category: ಸರಣಿ

ಕಡುಬಿನ ಪುರಾಣ: ಭವ್ಯ ಟಿ.ಎಸ್. ಸರಣಿ

ಮಳೆಗಾಲದಲ್ಲಿ ಮಲೆನಾಡಿನ ಹಸು, ಎತ್ತುಗಳಿಗೆ ಹುರುಳಿಕಾಳು ಬೇಯಿಸಿ ಕೊಡುತ್ತಾರೆ. ಈ ಹುರುಳಿ ಬೇಯಿಸಿದ ನೀರಿಗೆ ಹುರುಳಿಕಟ್ಟು ಎನ್ನುತ್ತಾರೆ. ಇದರ ರುಚಿ ಬಲ್ಲವರೇ ಬಲ್ಲರು. ಕುದ್ದು ದಪ್ಪಗಾಗಿ ಹದಗೊಂಡ ಹುರುಳಿಕಟ್ಟಿಗೆ ಸಾಸಿವೆ, ಬೆಳ್ಳುಳ್ಳಿ, ಕರಿಬೇವು, ಒಣ ಮೆಣಸಿನ ಒಗ್ಗರಣೆ ಕೊಟ್ಟು, ಸ್ವಲ್ಪ ವಾಟೆಹುಳಿ ಅಥವಾ ಹುಣಸೆಹಣ್ಣು ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿದರೆ ಘಮಘಮಿಸುವ ಹುರುಳಿಕಟ್ಟಿನ ಸಾರು ತಯಾರಾಗುತ್ತದೆ. ಇದನ್ನು ಕಡುಬಿಗೆ ಕಲಸಿ ತಿಂದರೆ ಸ್ವರ್ಗಕ್ಕೆ ಮೂರೇ‌ ಗೇಣು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಯುಗ ಯುಗಾದಿ ಕಳೆದರೂ ಮರೆಯಲಾಗದ ಸಂಭ್ರಮ: ಸುಮಾ ಸತೀಶ್ ಸರಣಿ

ಮನೆ ಹೆಂಗಸರಿಗೆ ಮಧ್ಯರಾತ್ರಿಯಿಂದಲೇ ಸುರುವಾಗ್ತಿತ್ತು. ಬೆಳಗಿನ ಜಾವ ಎರಡು ಗಂಟೆಯಿಂದಲೇ ಹೂರಣ ರುಬ್ಬುವ, ಒಬ್ಬಟ್ಟು ತಟ್ಟುವ, ಬೇಯಿಸುವ ಸದ್ದು. ಹೋಳಿಗೆ ವಾಸನೆಗೆ ಊರೆಲ್ಲಾ ಘಮಗುಡುತ್ತಿತ್ತು. ಒಬ್ಬಟ್ಟು ಸಾರು ಮರಳಿಸುತ್ತಿದ್ದರೆ ಮೂಗಿನ ಹೊಳ್ಳೆಗಳು ಅರಳಿ, ನಿಮಿರುತ್ತಿದ್ದವು. ದೊಡ್ಡ ದೊಡ್ಡ ಬೇಸನ್ನುಗಳಲ್ಲಿ ಒಬ್ಬಟ್ಟಿನ ರಾಶಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಯುಗಾದಿಯ ಸಂಭ್ರಮಗಳ ಕುರಿತ ಬರಹ ನಿಮ್ಮ ಓದಿಗೆ

Read More

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ

ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ