Advertisement

Category: ಸರಣಿ

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಮುದ ತುಂಬಿದ ಮಲೆನಾಡಿನ ಮದ್ವೆಮನೆ:‌ ಭವ್ಯ ಟಿ.ಎಸ್. ಸರಣಿ

ಗಂಡು ಮತ್ತು ಹೆಣ್ಣಿನ ಮನೆಯ ಒಂದು ಗೋಡೆಯ ಮೇಲೆ ಹಸೆ ಕಲಾವಿದರು ಚಿತ್ತಾರ ಬಿಡಿಸಿ ಗಂಡು ಮತ್ತು ಹೆಣ್ಣಿನ ಹೆಸರು ಬರೆದಿರುತ್ತಾರೆ. ಇದನ್ನು ಹಸೆಗೋಡೆ ಎನ್ನುತ್ತಾರೆ. ಚಪ್ಪರದ ದಿನ, ಮದುವೆ ಮಂಟಪಕ್ಕೆ ಹೊರಡಿಸುವ ಮೊದಲು, ಮದುವೆಯ ನಂತರ ಮದುಮಕ್ಕಳನ್ನು ಈ ಗೋಡೆಯ ಕೆಳಗೆ ಕೂರಿಸಿ ಬಂಧುಗಳೆಲ್ಲರೂ ಅಕ್ಷತೆ ಹಾಕಿ ಹರಸುತ್ತಾರೆ. ಈ ಹಸೆ ಚಿತ್ತಾರವು ಮದುವೆಯ ಸವಿನೆನಪಾಗಿ ಶಾಶ್ವತವಾಗಿ ಆ ಮನೆಯ ಗೋಡೆಯ ಮೇಲೆ ಉಳಿದಿರುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನನ್ನ ಯಶೋಧೆ ನಾಗಮ್ಮ: ಸುಮಾ ಸತೀಶ್ ಸರಣಿ

ಇದು ನಂಗೆ ಬುದ್ಧಿ ಬಂದ ಮ್ಯಾಗ್ಳ ಕತೆ. ಅದ್ಕೂ ಮುಂಚೆ, ಐದಾರು ವರ್ಷ ಆದ್ರೂ ಎಳೆ ಕೂಸಿಗೆ ಕಾಲು ಮೇಲೆ ಅಡ್ಡಾಕ್ಕಂಡು ನೀರು ಹುಯ್ಯಲ್ವೇ ಅಂಗೇ ಮಾಡೋಳು. ನಮ್ಮಮ್ಮ ‌ಅಯ್ಯೋ ಅದೇನು ಸಣ್ಣ ಮಗೀನೆ ಬಿಡು ಅಂದ್ರೂ ಬಿಡವಲ್ಲಳು. ಮಗೀಗೆ ಮೈನೋವು ಅಂತ ಕಾಲಿನ ಮ್ಯಾಗಾಕ್ಕಂಡು ಕೈಕಾಲು ಹಿಸುಕಿ ಹಿಸುಕಿ, ಅಮ್ಮುಂಗೆ ನೀರು ಹುಯ್ಯೋಕೆ ಏಳೋಳು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ

Read More

ಚಂದ್ರಮ್ಮನ್ನ ಹುಯ್ಯೋದು: ಸುಮಾ ಸತೀಶ್ ಸರಣಿ

ಏಸೊಂದು ಸೆಂದಾಕಿ ಪದ ಬಿಡುತ್ತಿದ್ದರು. ‘ಏಳ್ರಮ್ಮಣ್ಣಿದೀರಾ ನಿದ್ದೆ ಬತ್ತಾ ಐತೆ’ ಅಂಬ್ತ ಗಂಡಸರು ಯೋಳೋತಂಕ ಅಲ್ಲಿಂದ ಅಲ್ಲಾಡಿದ್ರೆ ಸೈ. ತಂಬಿಟ್ಟು ನಂಗೆ ಇಷ್ಟ ಅಂತ ವಸಿ ತುಪ್ಪ ಜಾಸ್ತಿ ಹಾಕಿ ಉಂಡೆ ಕಟ್ಟಿ ನಂಗೇಂತ ಮನೆಯ ನಿಲುವಿನಲ್ಲಿ ಮಕ್ಕಳಿಗೂ ಕಾಣದಂಗೆ ಬಚ್ಚಿಕ್ಕಿ ತಿನ್ನಿಸುತ್ತಿದ್ದ ನಾಗಮ್ಮ ನನ್ನ ಪಾಲಿನ ಯಶೋದೆಯೇ ಸೈ. ಎಡವಿ ಬಿದ್ದರೆ ಮನೆ ಸಿಗುತ್ತಿದ್ದರೂ ನಡುರಾತ್ರಿ ಮಗೀನ ಒಂದುನ್ನೇ ಕಳಿಸಕಾಯ್ತದಾ ಅಂತ ಕರೆತಂದು, ಮನೆ ಬಾಗಿಲು ತೆರೆದು, ‘ಅಮ್ಮಣ್ಣಿ, ಬಿಡ್ಡ ವಚ್ಚಿಂದಿ, ಪಂಡೇಯಮ್ಮೋ’ ಅಂತ ಹೇಳಿಯೇ ಹೋಗುತ್ತಿದ್ದಳು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ