Advertisement

Category: ಸರಣಿ

ಉತ್ತರ ಆಫ್ರಿಕಾದ ಇಸ್ಲಾಮಿಕ್ ರಾಷ್ಟ್ರ ಅಲ್ಜೀರಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಅಲ್ಜೀರಿಯಾದ ಜನರು ಫುಟ್‌ಬಾಲ್, ವಾಲಿಬಾಲ್ ಕ್ರೀಡೆಗಳ ಬಗ್ಗೆ ಹೆಚ್ಚು ಒಲವನ್ನು ಇಟ್ಟುಕೊಂಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಇಲ್ಲಿಯ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಾಕ್ಸಿಂಗ್‌ನಲ್ಲಿ ಸಾಧನೆ ಮೆರೆದಿದ್ದಾರೆ. ಸಾವಿರದೈನೂರು ಮೀಟರ್‌ಗಳ ಓಟದ ಸ್ಪರ್ಧೆಯಲ್ಲಿ ಅಲ್ಜೀರಿಯಾದ ಅಥ್ಲೀಟ್‌ಗಳ ಸಾಧನೆ ಮೆಚ್ಚುವಂಥದ್ದಾಗಿದೆ. ಹಲವು ಸಲ ಗೆಲುವಿನ ಮಾಲೆಯನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕಾರವಾರದ ಆ ದಿನಗಳು: ರಂಜಾನ್ ದರ್ಗಾ ಸರಣಿ

‘ನಮ್ಮ ಕಷ್ಟ ಸುಖದಲ್ಲಿ ಇವರು. ಇವರ ಕಷ್ಟ ಸುಖದಲ್ಲಿ ನಾವು. ನಮ್ಮ ನಡುವೆ ಧರ್ಮಗಳು ಅಡ್ಡ ಬರುವುದಿಲ್ಲ. ಧರ್ಮಗಳ ಗೋಜಿಗೆ ನಾವು ಹೋಗುವುದಿಲ್ಲ. ಅವುಗಳ ಪಾಡಿಗೆ ಅವು ಇರುತ್ತವೆ. ನಮ್ಮ ಪಾಡಿಗೆ ನಾವು ಇರುತ್ತೇವೆ. ಕೆಲಸ ಮಾಡುವವರಿಗೆ ಎಲ್ಲ ಧರ್ಮಗಳು ಒಂದೇ. ಕೆಲಸವಿಲ್ಲದವರಿಗೆ ಮತ್ತು ಕೆಲಸವಿಲ್ಲದೆ ಬದುಕಬೇಕೆನ್ನುವವರಿಗೆ ಧರ್ಮಗಳು ಬೇರೆ ಬೇರೆಯಾಗಿ ಕಾಣುತ್ತವೆ. ಆ ಅವರು ಉಗ್ರರೂಪ ತಾಳಿ ಅನ್ಯ ಧರ್ಮೀಯರನ್ನು ಕೊಲ್ಲುತ್ತಾರೆ ಇಲ್ಲವೆ ಅವರಿಂದ ಕೊಲೆಗೀಡಾಗುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 100ನೇ ಕಂತು ನಿಮ್ಮ ಓದಿಗೆ

Read More

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿ

ರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸುಲ್ಬ. ರಾಮಾ ಅಂದ್ರೆ ಸಾಕು ಹನುಮ ಓಡೋಡ್ಕಂಡು ಬರ್ತಾನೆ. ಆಗ ಬ್ಯಾರೆ ಆಟ ಕಟ್ದೆ ರಾಮ್ನೂ ಹಿಂದಿಂದ್ಲೇ ಬತ್ತಾನೆ‌ ಅಂಬೋದು ಅಜ್ಜಿ ಯೋಳ್ತಿದ್ದ ಇಚಾರ. ಅಂಗಾಗಿ ರಾಮನ ಹತ್ರುಕ್ಕೆ ಹೋಗಾಕೆ ಸಲೀಸು ಹನುಮಂತನ ಭಜನೆ ಮಾಡೋದು. ಹನುಮ ಕಪಿ ಅಲ್ವೇ. ಕಿಚಪಿಚಾಂತ ನಾವೂ ಕಪಿಗಳಂಗೇ ಭಜನೆ ಹಾಡ್ತಿದ್ವಿ. ಮರದಾಗಿರೋವೂ ಜಾತಿಪ್ರೀತಿಗೆ ಓಡಿಬರೋ ಅಂಗೆ ಇರ್ತಿತ್ತು ನಮ್ಮ ಆಲಾಪ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಅವಳು “ನಿಮ್ಮ ತರಹದವರನ್ನೇ ನಾನು ಕಾಲೇಜಿನಲ್ಲಿ ನೋಡಿದೆ” ಎಂದಾಗ ನಾನು ನಗುತ್ತಾ “ಹೋ.. ಹೋ… ಅವನಾ? ನನ್ನ ತಮ್ಮ, ಅವನನ್ನು ನೋಡಿ ನೀನು ನಾನೇ ಎಂದು ಭಾವಿಸಿದೆಯಾ” ಎಂದು ಹೊಸ ಕಥೆ ಕಟ್ಟಿದೆ. ಆಗ ಅವಳು “ಅದ್ಹೇಗೆ? ನೀವಿಬ್ಬರೂ ಒಂದೇ ಕ್ಲಾಸಲ್ಲಿ ಇರಬೇಕಿತ್ತಲ್ವಾ?” ಎಂದಾಗ “ಹೋ ಹೋ ಅದಾ ಅವನು ಫೇಲ್ ಆಗೀ ಆಗೀ ಹಿಂದಕ್ಕೆ ಉಳಿದುಕೊಂಡ ನಾನು ಪಾಸ್ ಆಗೀ ಆಗೀ ಮುಂದಕ್ಕೆ ಹೋದೆ” ಎಂದೆ. ಅವಳು ನಂಬಿದಳು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ