Advertisement

Category: ಸರಣಿ

ಹೋಳಿಗೆ ಕೊಡಿಸಿದ ಯುಗಾದಿ ಚಂದಿರ..: ಪೂರ್ಣೇಶ್‌ ಮತ್ತಾವರ ಸರಣಿ

ಹಬ್ಬದ ಹಿಂದಿನ ಸಂಜೆ “ನಾಳೆ ರಜಾ, ಕೋಳಿ ಮಜಾ..” ಎನ್ನುತ್ತಾ ರಜೆಯ ಸಡಗರವನ್ನು ಅನುಭವಿಸಿ, ಹಗಲಿಡೀ‌‌ ಆಟವಾಡಿ, ಮಧ್ಯಾಹ್ನ ಸಿಹಿ‌ ತಿಂದು ಖುಷಿಪಟ್ಟವರು ಸಂಜೆಯಾಗುತ್ತಲೇ ನಮಗೆ ತಿಳಿಯದಲೇ ಬೇಸರಿಸಿಕೊಂಡು ಬಿಡುತ್ತಿದ್ದೆವು. “ಹೋಂ ಸಿಕ್ ನೆಸ್” ಎಂಬುದು ನಮಗರಿವಿಲ್ಲದಲೇ ಹಬ್ಬದ ದಿನಗಳಲ್ಲೇ ಹೆಚ್ಚಾಗಿ ನಮ್ಮನ್ನು ಆವರಿಸಿಕೊಂಡು ಬಿಡುತ್ತಿತ್ತು. ಕೊಟ್ಟ ಹೋಂ ವರ್ಕ್ “ನಾಳೆ ಮಾಡಿದರಾಯ್ತು” ಎಂದು ಮುಂದೂಡಿ ಈಗ ಮಾಡಬೇಕಿರುವುದೂ ನಮ್ಮ ದುಃಖವನ್ನು ಮತ್ತಷ್ಟು ಹೆಚ್ಚಿಸಿ ಬಿಡುತ್ತಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೆರಡನೆಯ ಬರಹ

Read More

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಮದುವೆ ಮನೆ: ಸುಮಾ ಸತೀಶ್ ಸರಣಿ

ನಮ್ಮ‌ ಮನೆಗ್ಳಲ್ಲಿ ಮದ್ವೇ ಗೊತ್ತಾಗಿದ್ ತಕ್ಷಣ ಮಾಡ್ತಿದ್ದ ಏರ್ಪಾಟು ಅಂದ್ರೆ ಹಂಚು ಇಟ್ಟುಕೊಳ್ಳುವುದು. ಒಂದು ತಿಂಗಳ ಮುಂಚೇನೆ ತಯ್ಯಾರಿ ಇರ್ತಿತ್ತು. ದೊಡ್ಡತ್ತೆ, ಸಾವಿತ್ರಮ್ಮತ್ತೆ ಬಂದು ಸೇರುತ್ತಿದ್ದರು. ಅಕ್ಕ ತಂಗೀರ ಮಕ್ಳು ಸಹಾಯುಕ್ಕೆ ಬರ್ತಿದ್ರು. ಸೇರುಗಟ್ಟಲೆ ಅಕ್ಕಿ‌ ತೊಳೆದು ಹಾಕಿ, ರಾಶಿ ರಾಶಿ ಚಕ್ಲಿ ಮಾಡುತ್ತಿದ್ದರು. ಅಕ್ಕಪಕ್ಕದ ‌ಮನೆ‌ ಹೆಣ್ಣುಮಕ್ಕಳೂ ಬಂದು ಸಹಾಯ ಮಾಡುತ್ತಿದ್ದರು. ನಿಪ್ಪಟ್ಟು, ಕೋಡುಬಳೆ, ಗುಂಡು ಅದೂ ಇದೂ ಮಾಡಿಡುತ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಮದುವೆ ಮನೆಯ ಸಡಗರಗಳ ಕುರಿತ ಬರಹ ನಿಮ್ಮ ಓದಿಗೆ

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ