Advertisement

Category: ಸರಣಿ

ವೈ ದಿಸ್ ಡೆಲಿವರಿ ಡೆಲಿವರಿ ಡಿ…: ಸುಮಾವೀಣಾ ಸರಣಿ

ಮೊನ್ನೆ ಆಚೆ ಹೋಗಕೆ ಇದ್ದೆ. ಅಲ್ಲೊಬ್ಬ ಡೆಲಿವರಿ ಬಾಯ್ ಫೋನ್ ಲೌಡಲ್ಲಿ ಇಟ್ಕೊಂಡು “ಹಲೋ ಇವತ್ತು ಡಿಲೆವರಿ ಇತ್ತು” ಎಂದ. ಆಚೆಕಡೆಯಿಂದ ಹಲೋ ತಮ್ಮ ಹೆಸರು ಅಂದ್ರೆ ರತ್ನ ಅಂದ್ರು. ಹೌದು ಮೇಡಮ್ ಡೆಲಿವರಿ ಮಾಡ್ತೀನಿ ನೀವ್ ಇರ್ತೀರ ಎಂದರೆ ಆ ಕಡೆಯಿಂದ ಇಲ್ಲ ನನ್ ಮಗಳ್ ಇರ್ತಾಳೆ ಫೋನ್ ಮಾಡಿ ಹೇಳ್ತೀನಿ… ಹಣ ಕಳ್ಸ್ತೀನಿ ಅಲ್ಲೆ ಡೆಲಿವರಿ ಮಾಡಿ” ಅನ್ನೋದ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೈದನೆಯ ಬರಹ ನಿಮ್ಮ ಓದಿಗೆ

Read More

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿ

ಈ ಕಾರ್ಯದ ವಿರೋಧಾಭಾಸದ ಸ್ವರೂಪವು ಅವರ ಕವಿತೆಗಳಿಗೆ ಒಂದು ರೀತಿಯ ಮೊಂಡುತನದ ನಿಷ್ಠುರತೆಯನ್ನು ನೀಡುತ್ತದೆ. ಮೌನದ ದಿಕ್ಕಿನಲ್ಲಿ ಮಾತನಾಡುವ ಈ ಮಾತು, ಭಾಷೆಯ ಮೂಲಕ ಭಾಷೆಯಿಲ್ಲದವರ ಜಗತ್ತನ್ನು ವ್ಯಾಖ್ಯಾನಿಸುವ ಈ ಪ್ರಯತ್ನ – ಅದರೊಂದಿಗೆ, ಯಾವಾಗಲೂ ಅಡಗಿರುವ ವೈಫಲ್ಯದ ಭಾವನೆಯ ಜೊತೆ – ಸ್ಯೋಗ್ರೆನ್ ಅವರು ಇದನ್ನು ಮುವ್ವತ್ತಕ್ಕೂ ಹೆಚ್ಚು ಕವನ ಸಂಕಲನಗಳಲ್ಲಿ ನಿರಂತರವಾಗಿ ಮತ್ತು ಸಮಚಿತ್ತದಿಂದ ನಿರ್ವಹಿಸುತ್ತಾ ಬಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಲೆನಾರ್ಟ್ ಸ್ಯೋಗ್ರೆನ್-ರವರ (Lennart Sjögren, 1930) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕಡುಬಿನ ಪುರಾಣ: ಭವ್ಯ ಟಿ.ಎಸ್. ಸರಣಿ

ಮಳೆಗಾಲದಲ್ಲಿ ಮಲೆನಾಡಿನ ಹಸು, ಎತ್ತುಗಳಿಗೆ ಹುರುಳಿಕಾಳು ಬೇಯಿಸಿ ಕೊಡುತ್ತಾರೆ. ಈ ಹುರುಳಿ ಬೇಯಿಸಿದ ನೀರಿಗೆ ಹುರುಳಿಕಟ್ಟು ಎನ್ನುತ್ತಾರೆ. ಇದರ ರುಚಿ ಬಲ್ಲವರೇ ಬಲ್ಲರು. ಕುದ್ದು ದಪ್ಪಗಾಗಿ ಹದಗೊಂಡ ಹುರುಳಿಕಟ್ಟಿಗೆ ಸಾಸಿವೆ, ಬೆಳ್ಳುಳ್ಳಿ, ಕರಿಬೇವು, ಒಣ ಮೆಣಸಿನ ಒಗ್ಗರಣೆ ಕೊಟ್ಟು, ಸ್ವಲ್ಪ ವಾಟೆಹುಳಿ ಅಥವಾ ಹುಣಸೆಹಣ್ಣು ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿದರೆ ಘಮಘಮಿಸುವ ಹುರುಳಿಕಟ್ಟಿನ ಸಾರು ತಯಾರಾಗುತ್ತದೆ. ಇದನ್ನು ಕಡುಬಿಗೆ ಕಲಸಿ ತಿಂದರೆ ಸ್ವರ್ಗಕ್ಕೆ ಮೂರೇ‌ ಗೇಣು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಯುಗ ಯುಗಾದಿ ಕಳೆದರೂ ಮರೆಯಲಾಗದ ಸಂಭ್ರಮ: ಸುಮಾ ಸತೀಶ್ ಸರಣಿ

ಮನೆ ಹೆಂಗಸರಿಗೆ ಮಧ್ಯರಾತ್ರಿಯಿಂದಲೇ ಸುರುವಾಗ್ತಿತ್ತು. ಬೆಳಗಿನ ಜಾವ ಎರಡು ಗಂಟೆಯಿಂದಲೇ ಹೂರಣ ರುಬ್ಬುವ, ಒಬ್ಬಟ್ಟು ತಟ್ಟುವ, ಬೇಯಿಸುವ ಸದ್ದು. ಹೋಳಿಗೆ ವಾಸನೆಗೆ ಊರೆಲ್ಲಾ ಘಮಗುಡುತ್ತಿತ್ತು. ಒಬ್ಬಟ್ಟು ಸಾರು ಮರಳಿಸುತ್ತಿದ್ದರೆ ಮೂಗಿನ ಹೊಳ್ಳೆಗಳು ಅರಳಿ, ನಿಮಿರುತ್ತಿದ್ದವು. ದೊಡ್ಡ ದೊಡ್ಡ ಬೇಸನ್ನುಗಳಲ್ಲಿ ಒಬ್ಬಟ್ಟಿನ ರಾಶಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಯುಗಾದಿಯ ಸಂಭ್ರಮಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ