Advertisement

Category: ಸರಣಿ

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕೆಲವು ಬಾರಿ ಮನೆಯ ತಾಪತ್ರಯವಿದ್ದಾಗ ಸುಗ್ಗಿ ಮಾಡಲು ಕಷ್ಟ ಅಂತ ಫಸಲುಗುತ್ತಿಗೆ ಅಂತ ಕೊಡುವ ರೂಢಿಯಿತ್ತು. ಬೆಳೆಯ ಅಂದಾಜು ಮಾಡಿ ಇಂತಿಷ್ಟು ಹಣ ಅಂತ ನಿಗದಿಮಾಡಿ ಒಟ್ಟಾಗಿ ಹಣವನ್ನು ಸಂದಾಯ ಮಾಡುತ್ತಿದ್ದರು. ಆ ವರ್ಷ ಬೆಳೆ ಅಂದಾಜಿಗಿಂತ ಹೆಚ್ಚಾದರೆ ಅಥವಾ ಇವರ ಬೆಳೆಗೆ ಒಳ್ಳೆಯ ದರ ಬಂದರೆ ಬೆಳೆಗಾರರು ಕೈಕೈ ಹಿಸುಕಿಕೊಳ್ಳುತ್ತಿದ್ದರು. ʻಅಯ್ಯೋ! ಅನ್ಯಾಯವಾಗಿ ದುಡ್ಡು ಕಳಕಂಡೆ.ʼ ಅಂತ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎರಡನೆಯ ಬರಹ

Read More

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

Read More

ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಒಂದು ಕಾಲಕ್ಕೆ ಭರ್ಜರಿ ಭತ್ತ ಬೆಳೆಯುತ್ತಿದ್ದ ಗದ್ದೆಗಳು ಈಗ ವಾಸದ ಮನೆಗಳಾಗಿವೆ. ತಿಳಿ ನೀರು ಹರಿಯುತ್ತಿದ್ದ ತೋಡು ಮನುಷ್ಯನ ಕೊಳಕು ಆ ತೋಡನ್ನು ಸೇರಿ ಸೇರಿಸಿಕೊಂಡು ಕಪ್ಪಗೆ ಹರಿಯುತ್ತಿದ್ದರೆ ಇದು ಮನುಷ್ಯನ ನಾಗರೀಕತೆಯ ಹಂಬಲದ ಮುಖವಾಣಿ ಅನ್ನಿಸುತ್ತದೆ. ಒಟ್ಟು ನಮ್ಮೂರು ಮಡಿಕೇರಿ ಅಲ್ಲ ಮಡಿಯಾದಕೇರಿ ಈಗ ನಗರೀಕರಣಕ್ಕೆ ಒಳಗುಗೊಳ್ಳುವ ಹಂಬಲದಲ್ಲಿ ಮೂಲ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ.
ಸುಮಾವೀಣಾ ಬರೆಯುವ ಮಡಿಕೇರಿಯಲ್ಲಿ‌ ಕಳೆದ ಬಾಲ್ಯದ‌ ನೆನಪುಗಳ ಸರಣಿ “ಕೊಡಗಿನ ವರ್ಷಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ