Advertisement

Category: ಸರಣಿ

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

“ಡೆಸರ್ಟ್ಸ್‌” ಮಾತ್ರ ಬೇಡಪ್ಪ….: ದರ್ಶನ್‌ ಜಯಣ್ಣ ಸರಣಿ

ಈ ಪ್ರಯಾಣದ ನಡುವೆಲ್ಲಾ ನನ್ನನ್ನು ಕಾಡಿದ ವಿಷಯ ಮಧ್ಯದಲ್ಲೆಲ್ಲೋ ಗಾಡಿ ಪಂಕ್ಚರ್ ಆದರೆ ಏನು ಮಾಡುವುದು? ಎಸಿ ಕೈಕೊಟ್ಟರೆ ಹೇಗೆ ಸಂಭಾಳಿಸುವುದು? ಮರಳ ಮಳೆ ಬಂದು ದಾರಿ ಕಾಣದಾದರೆ ಏನು ಗತಿ, ಇತ್ಯಾದಿ. ಹಾಗೇನೂ ಆಗದಿದ್ದರೂ ರಿಯಾದ್ ತಲುಪುವವರೆಗೂ ಮತ್ತು ಎರಡು ದಿನದ ನಂತರ ವಾಪಾಸು ಬರುವಾಗಲೂ ನನ್ನನ್ನು ಬಿಟ್ಟು ಬಿಡದೆ ಕಾಡಿದ ಪ್ರಶ್ನೆಗಳು ಇವು. ದಾರಿ ಅತ್ಯಂತ ಬ್ಯುಸಿಯಾಗಿದ್ದರೂ, ಅಲ್ಲಲ್ಲಿ ಹತ್ತಾರು ಕಿಲೋಮೀಟರ್‌ಗಳ ನಂತರವೇ ಪೆಟ್ರೋಲ್, ತಿಂಡಿ ತಿನಿಸು, ಪಂಕ್ಚರ್ ಅಂಗಡಿ ಮತ್ತು ಇನ್ನಿತರೆ ಅಂಗಡಿಗಳು ನಿಗದಿತ ಜಾಗದಲ್ಲಿ ಮಾತ್ರವೇ ಇರುವುದು ಪರಿಸ್ಥಿತಿಯನ್ನ ಇನ್ನಷ್ಟು ಬಿಗಡಾಯಿಸಿತ್ತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಬೋಧಿಸುವಾಗ ಮಕ್ಕಳನ್ನು ನಿಭಾಯಿಸಿದ ರೀತಿ..: ಬಸವನಗೌಡ ಹೆಬ್ಬಳಗೆರೆ ಸರಣಿ

ಒಬ್ಬ ಹುಡುಗ ಮಾತ್ರ ‘ಡ್ಯಾನ್ಸಿಂಗ್’ ಪದ ಹೇಳಿದಾಗ ಜಾಸ್ತಿಯೇ ಕುಣಿಯುತ್ತಾ ಬಂದು ನನ್ನ ಹತ್ತಿರವೇ ಬಂದುಬಿಟ್ಟ. ನನಗೆ ತಕ್ಷಣಕ್ಕೆ ಸಿಟ್ಟು ಬಂದು ಒಂದು ಏಟನ್ನು ಕೊಟ್ಟುಬಿಟ್ಟೆ. ಅವನು ಜೋರಾಗಿ ಅಳಲು ಶುರು ಮಾಡಿದ. ಹಿಂದೆ ಪಾಠ ನೋಡಲು ಕುಳಿತ ಲೆಕ್ಚರ್ ನನಗೆ ಬಯ್ಯುತ್ತಾರೆಂದು ನಾನು ತಕ್ಷಣ ಅಳುತ್ತಿದ್ದ ಹುಡುಗನ ಬಳಿ ಹೋಗಿ ಮತ್ತೆ ಟಚ್ ಮಾಡಿದಂತೆ ಮಾಡಿ ‘ಬೀಟಿಂಗ್’ ಎಂದು ಹೇಳಿದೆ. ಹುಡುಗರೂ ‘ಬೀಟಿಂಗ್…… ಬೀಟಿಂಗ್’ ಎಂದರು. ಅವನು ಅಳುವುದನ್ನು ತೋರಿಸಿ ‘ಕ್ರೈಯಿಂಗ್.. ಕ್ರೈಯಿಂಗ್’ ಎಂದು ಹೇಳಿದೆನು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್‌” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ