ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ
ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ
