Advertisement

Category: ಸರಣಿ

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನನ್ನ ಯಶೋಧೆ ನಾಗಮ್ಮ: ಸುಮಾ ಸತೀಶ್ ಸರಣಿ

ಇದು ನಂಗೆ ಬುದ್ಧಿ ಬಂದ ಮ್ಯಾಗ್ಳ ಕತೆ. ಅದ್ಕೂ ಮುಂಚೆ, ಐದಾರು ವರ್ಷ ಆದ್ರೂ ಎಳೆ ಕೂಸಿಗೆ ಕಾಲು ಮೇಲೆ ಅಡ್ಡಾಕ್ಕಂಡು ನೀರು ಹುಯ್ಯಲ್ವೇ ಅಂಗೇ ಮಾಡೋಳು. ನಮ್ಮಮ್ಮ ‌ಅಯ್ಯೋ ಅದೇನು ಸಣ್ಣ ಮಗೀನೆ ಬಿಡು ಅಂದ್ರೂ ಬಿಡವಲ್ಲಳು. ಮಗೀಗೆ ಮೈನೋವು ಅಂತ ಕಾಲಿನ ಮ್ಯಾಗಾಕ್ಕಂಡು ಕೈಕಾಲು ಹಿಸುಕಿ ಹಿಸುಕಿ, ಅಮ್ಮುಂಗೆ ನೀರು ಹುಯ್ಯೋಕೆ ಏಳೋಳು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ

Read More

ಚಂದ್ರಮ್ಮನ್ನ ಹುಯ್ಯೋದು: ಸುಮಾ ಸತೀಶ್ ಸರಣಿ

ಏಸೊಂದು ಸೆಂದಾಕಿ ಪದ ಬಿಡುತ್ತಿದ್ದರು. ‘ಏಳ್ರಮ್ಮಣ್ಣಿದೀರಾ ನಿದ್ದೆ ಬತ್ತಾ ಐತೆ’ ಅಂಬ್ತ ಗಂಡಸರು ಯೋಳೋತಂಕ ಅಲ್ಲಿಂದ ಅಲ್ಲಾಡಿದ್ರೆ ಸೈ. ತಂಬಿಟ್ಟು ನಂಗೆ ಇಷ್ಟ ಅಂತ ವಸಿ ತುಪ್ಪ ಜಾಸ್ತಿ ಹಾಕಿ ಉಂಡೆ ಕಟ್ಟಿ ನಂಗೇಂತ ಮನೆಯ ನಿಲುವಿನಲ್ಲಿ ಮಕ್ಕಳಿಗೂ ಕಾಣದಂಗೆ ಬಚ್ಚಿಕ್ಕಿ ತಿನ್ನಿಸುತ್ತಿದ್ದ ನಾಗಮ್ಮ ನನ್ನ ಪಾಲಿನ ಯಶೋದೆಯೇ ಸೈ. ಎಡವಿ ಬಿದ್ದರೆ ಮನೆ ಸಿಗುತ್ತಿದ್ದರೂ ನಡುರಾತ್ರಿ ಮಗೀನ ಒಂದುನ್ನೇ ಕಳಿಸಕಾಯ್ತದಾ ಅಂತ ಕರೆತಂದು, ಮನೆ ಬಾಗಿಲು ತೆರೆದು, ‘ಅಮ್ಮಣ್ಣಿ, ಬಿಡ್ಡ ವಚ್ಚಿಂದಿ, ಪಂಡೇಯಮ್ಮೋ’ ಅಂತ ಹೇಳಿಯೇ ಹೋಗುತ್ತಿದ್ದಳು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

‘ಮೀಸೆಯ ಮಹಿಮೆ’ ಎಂಬ ವಿಷಯದ ಬಗ್ಗೆ ನಾನೇಕೆ ಬರೆದೆ?!: ಬಸವನಗೌಡ ಹೆಬ್ಬಳಗೆರೆ ಸರಣಿ

ಅಂದಿನಿಂದ ಮೇಡಂ ಜೊತೆ ನಾನು ಅಷ್ಟಾಗಿ ಮಾತನಾಡಿಸುತ್ತಿರಲಿಲ್ಲ. ಪಾಠ ಮಾಡುವಾಗ ವಾದಗಳು ನನ್ನಿಂದ ಇರುತ್ತಿತ್ತು. ಒಮ್ಮೆ ಪೋಷಕರಿಗೆ ಹೆಣ್ಣು ಅಥವಾ ಗಂಡು ಎಂಬ ಲಿಂಗ ನಿರ್ಧಾರವಾಗಲು ಯಾರು ಕಾರಣ? ಎಂಬ ಪ್ರಶ್ನೆಯನ್ನು ನಮ್ಮ ಮುಂದಿಟ್ಟರು. ಆಗ ಕಾಲೇಜಿನ ನಮ್ಮ ಸೆಕ್ಷನ್‌ನಲ್ಲಿದ್ದ 60 ರಲ್ಲಿ 59 ಪ್ರಶಿಕ್ಷಣಾರ್ಥಿಗಳು ಹೆಣ್ಣೇ ಕಾರಣ ಎಂದರು. ನಾನೊಬ್ಬ ಮಾತ್ರ ಒಬ್ಬ ವ್ಯಕ್ತಿಯ ಲಿಂಗ ನಿರ್ಧಾರಕ್ಕೆ ಗಂಡೇ ಕಾರಣ ಎಂಬುದನ್ನು ಸಕಾರಣ ಸಹಿತ ತಿಳಿಸಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಏಳು….. ಕೋಡಗ…… ಕೊಡಗು: ಸುಮಾವೀಣಾ ಸರಣಿ

“ಮಗನೆ ಏಳು!” ಎಂದೆ. “ಎಷ್ಟು ಗಂಟೆ” ಎಂದು ನಿದ್ರೆಗಣ್ಣಲ್ಲಿಯೇ ಅವನು ಕೇಳಿದ “ಏಳು” ಎಂದೆ. “ಗಂಟೆ ಏಳಾಗಿದೆ ಎದ್ದೇಳು” ಎನ್ನಬಹುದಾಗಿತ್ತು. ಅವನ ಪ್ರಶ್ನೆ ಮತ್ತು ನನ್ನ ಕಮಾಂಡ್ ಒಂದೇ ಪದದಲ್ಲಿ ಮುಗಿಯಿತು. ಇಂಥ ಬ್ಯಾಡ್ ಅಲ್ಲ ಬೆಡ್ ತರಲೆಗಳು ಸಹಜವೇ ಅಲ್ವೆ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾರನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ