Advertisement

Category: ಸರಣಿ

ಕತೆ ಕಟ್ಟುವ ಕಲೆಗಾರರು: ಸುಮಾ ಸತೀಶ್ ಸರಣಿ

ಆಗೆಲ್ಲಾ ಯರಗುಂಟೇಗೆ ಊರಿನ ತಂಕ ಬಸ್ಸಿರಲಿಲ್ಲ. ಒಂದೋ ಎರಡೊ ಕಿಲೋಮೀಟರ್ ನಡೆದು ಹೋಗಬೇಕಿತ್ತು. ಇನ್ನೂ ಕತೆ‌ ಮುಗಿದಿಲ್ಲ, ಯಾಸೆಟ್ಗೆ ಅತ್ಲಾಗೆ ನಡಿಯಮ್ಮಿ, ಮನೆತಂಕ ಬರ್ತೀನಿ ಅಂತ ಅದೇ ಅವತಾರದಲ್ಲಿ ಮಗಳ‌ಮನೆ ತಂಕಾನೂ ಹೋಗಿದೆ. ಬೀಗರು ಇವ್ರ ಅವತಾರ ನೋಡಿ, ನಕ್ಕಂಡು ಇವತ್ತಿದ್ದು ನಾಳೆ ಹೋಗಿ ಅಂದ್ರಂತೆ. ಈ ಅಜ್ಜಿ, ಹೂ ನನ್ ಕತೆ ಇನ್ನೂ ಮುಗಿದಿಲ್ಲ ಅಂತ ಕತೆ ಪೂರ್ತಿ ಹೇಳಿದ್ದಾದ ಮೇಲೆ ಬೇರೆ ಸೀರೆ ಉಟ್ಕಂಡು ವಾಪಸ್ ಬಂತಂತೆ. ಇದ್ನ ಹೇಳ್ಕಂಡು‌ ನಮ್ಮತ್ತೆದೀರೆಲ್ಲಾ ನಗಾಡ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಮೌಲ್ಯಗಳಿರುವುದು ಪಾಲಿಸಲೇ ಹೊರತು, ಬರೀ ಬೋಧಿಸಲಿಕ್ಕಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಬಹುತೇಕರು ಮಕ್ಕಳಿಗೆ ತಮ್ಮ ಮಗುವಿನ ಆಸಕ್ತಿಯ ಕ್ಷೇತ್ರ ಯಾವುದು? ಎಂಬುದನ್ನೇ ಗುರುತಿಸಿಯೇ ಇರುವುದಿಲ್ಲ. ತಾವು ಏನನ್ನು ಅಂದುಕೊಂಡಿರುತ್ತಾರೋ ಅದನ್ನು ಸಾಧಿಸಲು ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ. ಟಿವಿ ಮಾಧ್ಯಮಗಳಲ್ಲಿ ಬರುವ ಸ್ಪರ್ಧೆಗಳಲ್ಲಿ ತಮ್ಮ ಮಗುವೂ ಭಾಗವಹಿಸಬೇಕು, ಬೇಗ ಫೇಮಸ್ ಆಗಬೇಕು ಎಂದು ಕೆಲವರು ತಮ್ಮ ಮಗುವಿಗೆ ಇಷ್ಟವಿದೆಯೋ ಇಲ್ಲವೋ ಎಂದು ಕೇಳದೇ ಸಿಕ್ಕ ಸಿಕ್ಕ ಕ್ಲಾಸ್‌ಗಳಿಗೆಲ್ಲಾ ಸೇರಿಸುತ್ತಾರೆ. ಜೊತೆಗೆ ಮಣಭಾರದ ಪುಸ್ತಕ, ಟ್ಯೂಷನ್! ಆ ಕೋಚಿಂಗ್, ಈ ಕೋಚಿಂಗ್ ಅಂತಾ ಮಕ್ಕಳ ಬಾಲ್ಯ ಇದರಲ್ಲೇ ಕಳೆದುಹೋಗುತ್ತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮೊಗ್ಗಿನ ಜಡೆಯ ಹುಡುಗಿಯರು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎದುರಿಗೆ ಸಿಕ್ಕಿದವರಿಗೆಲ್ಲ ಮಣಿ ತನ್ನ ಕೆಲಸದ ಬಗ್ಗೆ ಹೇಳಿಕೊಂಡ. ಕಮ್ಯೂನಿಟಿ ಹಾಲ್ ಒಳಕ್ಕೆ ಹೋಗಿ ಅಲ್ಲಿ ಇರುವವರಿಗೆಲ್ಲ ಹೇಳಿದ. ಮಣಿಗೆ ಏನು ಮಾಡಬೇಕೊ ಯಾರಿಗೆಲ್ಲ ಹೇಳಬೇಕೊ ಒಂದೂ ಅರ್ಥವಾಗಲಿಲ್ಲ. ಅವನ ಖುಷಿಗೆ ಪಾರವೇ ಇರಲಿಲ್ಲ. ಸೆಲ್ವಿಗೆ ಹೇಳುವುದು ಹೇಗೆ? ಆಲೋಚಿಸತೊಡಗಿದ. ರಾತ್ರಿ ಅವರ ಕಾಲೋನಿಗೆ ಹೋಗುವುದು ಸರಿಯಲ್ಲ. ನಾಳೆ ಹೇಳಿದರೆ ಆಯಿತು ಎಂದುಕೊಂಡ. ಕೊನೆಗೆ ಎಲ್ಲಾ ಸುತ್ತಿಕೊಂಡು ಬಂದು ಕತ್ತಲಲ್ಲಿ ಕಲ್ಲು ಬಂಡೆಯ ಮೇಲೆ ಸೀನ ಮತ್ತು ಮಣಿ ಕುಳಿತುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕಂಕುಳಲ್ಲಿ ಕತೆ ಪುಸ್ತಕ, ಎದೆಯಲ್ಲಿ ಕಥಾಸಾಗರ: ಸುಮಾ ಸತೀಶ್‌ ಸರಣಿ

ಅಂಗೆ ನೋಡಿದ್ರೆ ನಮ್ಮ‌ ನಾಗೂ ಅತ್ತೆಗೆ ಅಕ್ಷರಾನೇ ತಲೆಗೆ ಹತ್ತಲಿಲ್ಲ.‌ ಕೊನೆಗೆ ಅವರಿಗೆ ಸಂಗೀತ ಕಲಿಸಲು ಹಾರ್ಮೋನಿಯಂ ಮೇಷ್ಟ್ರನ್ನ ಕರೆಸಿದ್ರು. ಆ ಮೇಷ್ಟ್ರು ಮೊದಲು ಕಾಗುಣಿತ ತಿದ್ದಿಸಿ ಆಮೇಲೆ ಸಂಗೀತ ಹೇಳಿಕೊಟ್ಟಿದ್ದರು. ನಮ್ಮತ್ತೆಯ ಅಲ್ಪಪ್ರಾಣ ಮಹಾಪ್ರಾಣಗಳಿಗೆ ಜೀವ ತುಂಬಿದರು ಮೇಷ್ಟ್ರು. ಮೊದಲೇ ಕಲ್ಪನಾ ಚತುರೆ ಅತ್ತೆ. ಅಕ್ಷರಾನೂ ಬಂದ ಮೇಲೆ ಕತೆ ಬರೇಯೋಕೆ ಶುರು ಮಾಡಿದ್ರು. ಇಷ್ಟೇ ಅಲ್ಲ, ಅಕ್ಕಂದಿರ ಮಕ್ಕಳನ್ನು ಬಳಿ ಕೂರಿಸಿಕೊಂಡು ಸ್ವಾರಸ್ಯಕರವಾಗಿ ಕತೆ ಕಟ್ಟಿ ಹೇಳುವ ಕಲೆ ಇವರಲ್ಲಿ ಸೊಗಸಾಗಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ