Advertisement

Category: ಸರಣಿ

ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ

ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ

Read More

ಚುಟುಕು ಹೇಳಿ ನಾನು ಎಲ್ಲರ ಮುಂದೆ ಚುಟುಕಾಗಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಹೀಗೆ ಹೇಳಿದ ನಂತರ ಎಲ್ಲರೂ ನನ್ನ ಚುಟುಕನ್ನು ಮೆಚ್ಚುತ್ತಾರೆ ಎಂದುಕೊಂಡಿದ್ದೆ. ಆದರೆ ಆಗಿದ್ದೆ ಬೇರೆ. ಸಾಹಿತ್ಯದ ಬಗ್ಗೆ ಆಸಕ್ತಿಯಿದ್ದ ಬಿಕೆಎಂ ಸರ್ ಎದುರಿಗೆ ಹೇಳಿದ್ದರೆ ಅವರು ಅದನ್ನು ಯಾವ ರೀತಿಯಾಗಿ ತೆಗೆದುಕೊಳ್ಳುತ್ತಿದ್ದರೋ ಗೊತ್ತಿಲ್ಲ. ಆದರೆ ಅವರು ನನಗೆ ಹಿಗ್ಗಾ ಮುಗ್ಗಾ ಬಯ್ದರು. ಹುಡುಗಿಯರು ಜಗತ್ತಿನಲ್ಲಿ ನಾನೇನೋ ದೊಡ್ಡ ತಪ್ಪು ಮಾಡಿದ್ದ ರೀತಿಯಲ್ಲಿ ನನ್ನನ್ನು ನೋಡಲು ಶುರು ಮಾಡಿದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬಣ್ಣವೆಂದರೆ…. ಕಲರ್ ಎಂದಷ್ಟೇ ಅಲ್ಲ!: ಸುಮಾವೀಣಾ ಸರಣಿ

ಪೂರ್ವಾಂಗನೆ ಪಶ್ಚಿಮಾಂಗನೆಗೆ ಬಣ್ಣಗಳ ಕುರಿತು ಕವಿ ಜಿ.ಎಸ್ ಎಸ್ ಹೇಳುತ್ತಾರಲ್ಲ… ಕಣ್ಣಿನಲ್ಲಿ ಕಪ್ಪು ವರ್ಣದ ಭಾಗ ಇಲ್ಲದೆ ಇದ್ದಿದ್ದರೆ ಹತ್ತಿಯ ನಡುವೆ ಕಪ್ಪು ಬೀಜಗಳು ಇಲ್ಲದೆ ಇದ್ದಿದ್ದರೆ, ಕಪ್ಪಾದ ಕತ್ತಲು ಇಲ್ಲದೆ ಇದ್ದಿದ್ದರೆ, ಕಪ್ಪು ಮೋಡ ಕವಿದು ಮಳೆ ಬಾರದೆ ಇದ್ದಿದ್ದರೆ ಮನುಷ್ಯ ಸುಖವಾಗಿ ಎಲ್ಲಿರುತ್ತಿದ್ದ? ಕಪ್ಪು ಕೇಶರಾಶಿ ಇಲ್ಲದೆ ಇದ್ದರೆ ಹೇಗೆ ಸುಂದರವಾಗಿ ಕಾಣುತ್ತಿದ್ದ? ಕಪ್ಪು ಬಣ್ಣವನ್ನು ವ್ಯಕ್ತಿತ್ವ ಗುರುತಿಸುವಲ್ಲಿ ಇರಬೇಕೇ ಹೊರತು ಬದುಕಿನ ಪರಿಭಾಷೆಗಳಲ್ಲಿ ಒಡಮೂಡುವ ಪರಿಪ್ರೇಕ್ಷಗಳಿಂದಲ್ಲ ಎನ್ನುವುದೆ ನನ್ನ ಅನಿಸಿಕೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಭವ್ಯ ಟಿ.ಎಸ್. ಹೊಸ ಸರಣಿ “ಮಲೆನಾಡಿನ ಹಾಡು-ಪಾಡು” ಶುರು

ದಟ್ಟವಾಗಿ ಹಬ್ಬಿರುವ ಕಾಡಿನ ಹಸಿರ ನಡುವೆ ಸಂಚರಿಸುತ್ತಿರುವಾಗ ಏನೋ ಶಬ್ದ ಕೇಳಿ ಬೆಚ್ಚಿದಳು. ಅಲ್ವೇ…ಇಲ್ಲಿ ಕಾಡುಪ್ರಾಣಿಗಳಿರೋದಿಲ್ವ?? ಆಶ್ಚರ್ಯದಿಂದ ಕೇಳಿದಳು. ಇವೆ. ಆದರೆ ಅಷ್ಟೊಂದೇನೂ ಇಲ್ಲ ಅಂದೆ. ಆದರೂ ಅವಳಿಗೆ ಭಯ. ಅದು ಹೇಗೆ ನೀವೆಲ್ಲಾ ಈ ಒಂಟಿಮನೆಗಳಲ್ಲಿ ನಿರ್ಭೀತಿಯಿಂದ ಇರುತ್ತೀರಿ. ನಮ್ಮ ಕಡೆ ಮನೆಗಳೆಲ್ಲಾ ಒತ್ತೊತ್ತಾಗಿರುತ್ತವೆ. ಸುತ್ತಮುತ್ತ ಜನರಿರುತ್ತಾರೆ. ನಿಮ್ಮ ಕಡೆ ಜನ ತುಂಬಾ ಧೈರ್ಯವಂತರು.. ಅಂತ ಮೆಚ್ಚುಗೆ ವ್ಯಕ್ತಪಡಿಸಿದಳು. ನಾನು ಏನಾದರೂ ಇಲ್ಲಿ ಇದ್ದಿದ್ದರೆ ಎಲ್ಲಿ ಹುಲಿ ಬಂತೋ, ಕರಡಿ ಬಂತೋ ಎಂದು ಹೆದರಿ ಹೆದರಿ ಸಾಯುತ್ತಿದ್ದೆ… ಅಂದಳು. ಇಬ್ಬರೂ ನಗುತ್ತಾ ಸಾಗಿದೆವು.
ಭವ್ಯ ಟಿ.ಎಸ್. ಹೊಸ ಸರಣಿ “ಮಲೆನಾಡಿನ ಹಾಡು-ಪಾಡು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ