Advertisement

Category: ಸರಣಿ

ಹುಚ್ಚಾಟಗ್ಳು: ಸುಮಾ ಸತೀಶ್ ಸರಣಿ

ಸ್ಯಾನೆ ಟೇಮಿದ್ರೆ ಉಂಗುರ ಸೆಂದಾಗಿ ಮಾಡ್ತಿದ್ವಿ. ವೈನಾಗಿ ಜಡೆ ಹೆಣ್ದು ಅದುನ್ನ ಬೆಳ್ಳಿನ್ ಗಾತ್ರುಕ್ಕೆ ಸರ್ಯಾಗಿ ಬಗ್ಗಿಸಿ, ಸುತ್ತಿ‌ ಬಾಲ ಇಲ್ದಂಗೆ ಮಾಡೀವಿ. ಆತ್ರ ಇದ್ರೆ ತಿಥಿ ಮಾಡ್ಸಾ ಐನೋರು ದರ್ಬೇನಾಗೆ (ಒಣಗಿದ್ ಹುಲ್ಲು) ಸುಮ್ಕೆ ಒಂದು ಗಂಟು ಆಕಿ, ಬೆಟ್ಟಷ್ಟು ಉದ್ದೂಕೆ ನಿಟಾರ್ ಅಂತ ನಿಂತಿರಾ ಹುಲ್ಲು ಕೊಟ್ಟು ಉಂಗ್ರ ಆಕ್ಕಳಿ ಅಂಬಲ್ವೇ ಅಂಗೇ ನಾವೂ ಸುಮ್ಕೆ ಒಂದು ಗಂಟು ಹಾಕಿ, ಉದ್ದೂಕೆ ಗರಿ ಅಂಗೇ ಬುಟ್ಟು, ಕೈಯಾಗೆ ಏರ್ಸಿ ಓಡ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಹಲವಾರು ಬಾರಿ ನಮ್ಮನೆ ಕಂಡೀಶನ್‌ಗೆ ಚೆನ್ನಾಗಿ ಓದಬೇಕು ಆದರೆ ಈ ರೀತಿ ಯಾಕೆ ಮಾಡ್ತಾ ಇದೀನಿ ಅನಿಸೋದು. ಆದರೆ ನಾನು, ಲಿಂಗರಾಜ, ಸುಧಾಕರ ಅಕ್ಟೋಬರ್ ವೇಳೆಗಾಗಲೇ ಈ ವರ್ಷ ರಿಜೆಕ್ಟ್ ಮಾಡಬೇಕು ಅಂತಾ ತೀರ್ಮಾನ ಮಾಡಿದ್ವಿ. ನಾನೂ ಈ ತೀರ್ಮಾನಕ್ಕೆ ಬರೋದಿಕ್ಕೂ ಒಂದು ಕಾರಣ ಇತ್ತು. ನಾನು ಮೊದಲ ಪಿಯೂಸಿಯಿಂದ ದ್ವಿತೀಯ ಪಿಯೂಸಿಗೆ ಕಾಲೇಜ್ ಬದಲಾಯಿಸಬೇಕು ಅಂತಾ ಹೋದಾಗ 2 ರಿಂದ 3 ತಿಂಗಳು ಬೋರ್ಡ್‌ಗೆ ಓಡಾಟದ ಮೂಲಕ ಸಮಯ ವ್ಯರ್ಥವಾಗಿ ಹೋಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ