Advertisement

Category: ಸರಣಿ

ಕೆಂಬೂತ: ಡಾ. ಎಸ್.ವಿ. ನರಸಿಂಹನ್‌‌ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿ

ಇವುಗಳದ್ದು ತುಂಬಾ ಸಂಕೋಚ ಸ್ವಭಾವ. ಇದರ ರೆಕ್ಕೆಗಳು ದುರ್ಬಲವಾದ್ದರಿಂದ ಇವು ಹೆಚ್ಚಾಗಿ ಮರ-ಪೊದೆಗಳಲ್ಲಿ ಕುಪ್ಪಳಿಸಿಕೊಂಡು ಆಹಾರವನ್ನು ಅರಸುತ್ತವೆ. ಕೆಂಬೂತಗಳ ಆಹಾರ ಬಲುಬಗೆಯ ಕೀಟಗಳು, ಹುಳುಗಳು, ಧಾನ್ಯಗಳು, ಹಣ್ಣುಗಳು, ಬೀಜಗಳು, ಅನ್ಯ ಹಕ್ಕಿಯ ಮೊಟ್ಟೆಗಳು, ಚಿಕ್ಕ ಹಾವುಗಳು, ಕೆಲ ವಿಷಕಾರಿ ಹಣ್ಣುಗಳು ಮತ್ತು ಅದರ ಬೀಜಗಳು. ಪಾಮ್ ಎಣ್ಣೆ ಮರದಲ್ಲಿನ ಹಣ್ಣನ್ನು ಬಯಸುವ ಇವು, ಪಾಮ್-ಮರದ ಕೃಷಿಕರಲ್ಲಿ ಬೆಳೆ ನಾಶಕ ಎಂದೆನಿಸಿವೆ. ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂಬೂತದ ಕುರಿತ ಬರಹ ಇಲ್ಲಿದೆ

Read More

ಅಲೆಮಾರಿ ಗುಡಾರಗಳು, ಮುಂಗುಸಿ ಭದ್ರ ಮತ್ತು ಮಂಚಿಗೆ: ಎಸ್. ಗಂಗಾಧರಯ್ಯ ಅನುಭವ ಕಥನ

ಭದ್ರ ಬಂದವನೇ ಕೈಯ್ಯಲ್ಲಿದ್ದ ಪುಟ್ಟ ಬುಡುಬುಡಿಕೆಯನ್ನು ಚೆಡ್ಡಿ ಜೇಬೊಳಕ್ಕೆ ತುರುಕಿಕೊಂಡು `ಎದ್ದಾಳಿ ಮತ್ತೆ ಬೇಗ’ ಅಂತ ನಮ್ಮನ್ನು ಏಳಿಸಿಕೊಂಡು ಶೆಟ್ಟೀಕೆರೆಯ ಕೆರೆಯ ಅಂಗಳಕ್ಕೆ ಕರೆದೊಯ್ದು ಅಲ್ಲಿ ತಾವರೆ ಬೀಜಗಳನ್ನು ಹುಡುಕತೊಡಗಿದ. ಭದ್ರನೊಂದಿಗೆ ನಾವೂ ಕೈ ಜೋಡಿಸಿದೆವು. ಕೆರೆಯ ಅಂಗಳದಲ್ಲಿ ಬಿಟ್ಟಿದ್ದ ಬಿರಿಗಳ ನಡುವಲ್ಲಿ ಗೋಚರಿಸುತ್ತಿದ್ದ ತಾವರೆ ಬೀಜಗಳನ್ನು ಮೂವರೂ ಜೇಬಿಗಿಳಿಕೊಂಡು ಮತ್ತೆ ಮಂಚಿಗೆಯತ್ತ ಬಂದೆವು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಮೂರನೆಯ ಕಂತು

Read More

ಮೊದಲ ಶಾಲೆಯ ಪ್ರಾರಂಭದ ಅನುಭವಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ  

ನಾನು ಆ ಮನೆಗೆ ಹೋಗುತ್ತೇನೆ ಎಂದು ತಿಳಿದು ಅವರು ಬಾಕಿ ಇರುವ ಕರೆಂಟ್ ಬಿಲ್ ಕಟ್ಟಿದ್ದರಂತೆ ಹಾಗೂ ಕ್ಲೀನ್ ಮಾಡಿಸಿದ್ದರಂತೆ. ಯಾವಾಗ ನಾನು ಹೋಗೋದಿಲ್ಲ ಎಂದು ತಿಳಿದ ಮೇಲೆ ನನ್ನ ಮೇಲೆ ಗರಂ ಆದರು. ಆದರೆ ಇದನ್ನು ತೋರಿಸಿಕೊಳ್ಳುವ ಹಾಗಿರಲಿಲ್ಲ. ಮನದಲ್ಲಿ ನನ್ನ ಬಗ್ಗೆ ಕೋಪವು ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಆಗ ಇವರೇ ನಮ್ಮ ಹೆಚ್ಚೆಂ ಆದ್ದರಿಂದ ನನಗೆ ಕಿರಿಕ್ ಕೊಡಲು ಶುರು ಮಾಡಿದರು. ರಜಾ ಕೇಳಿದಾಗ ತಕ್ಷಣ ಪ್ರತಿಕ್ರಿಯೆ ನೀಡದೇ ಇರುತ್ತಿದ್ದುದು, ಸುಖಾ ಸುಮ್ಮನೇ ಅದು ಮಾಡಿಲ್ಲ ಇದು ಮಾಡಿಲ್ಲ ಎಂದು ಹೇಳುತ್ತಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಅರಾ ಮಿತ್ರ ಸಿಕ್ಕರ!: ಎಚ್. ಗೋಪಾಲಕೃಷ್ಣ ಸರಣಿ

ಇದಕ್ಕಿಂತ ಸುಲಭ ಉಪಾಯ ಒಂದು ನನ್ನ ತಲೆಯಲ್ಲಿದೆ. ಅದೇನಪ್ಪಾ ಅಂದರೆ ಯಾವುದೇ ರಸ್ತೆಯಲ್ಲಿ ಯಾವುದೇ ಗಂಡಸು ಯಾ ಹೆಂಗಸು ಹುಂಜನ ಹಾಗೇ ನಡೆಯುತ್ತಾ ಇದ್ದಾರೆ ಅಂದರೆ ಅವರು ನೂತಕ್ಕೆ ನೂತು ಬರೆಹಗಾರ ಅಂತ. ನೂತಕ್ಕೆ ನೂತು ಅನ್ನುವುದು ಕನ್ನಡ ಅಲ್ಲ, ತಮಿಳು ಇರಬಹುದು. ಆದರೆ ಈಚೆಗೆ ಬರಹದ ಎಫೆಕ್ಟ್ ಹೆಚ್ಚು ಎದ್ದು ಕಾಣಬೇಕು ಎನ್ನುವ ಏಕಮೇವ ಉದ್ದೇಶದಿಂದ ಬೇರೆ ಬೇರೆ ಭಾಷೆಗಳ ಇಂತಹ ಪದಪುಂಜಗಳು ನಮ್ಮಲ್ಲೂ ಹೆಚ್ಚಿವೆ. ಪುರಾವೆ ಬೇಕಾ? ನಮ್ಮ ಪತ್ರಿಕೆ ನೋಡಿ ಅಷ್ಟೇ.. ಕಥೆಗೆ ಕಾಲಿಲ್ಲವಂತೆ, ಅದಕ್ಕೆ ಬರೇ ರೆಕ್ಕೆ ಅಂತೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೭ನೇ ಬರಹ ನಿಮ್ಮ ಓದಿಗೆ

Read More

ರಾತ್ರಿ ಸ್ಕೂಲು, ಶನಿ ಮಹಾತ್ಮೆ ಮತ್ತು ಚಳ್ಳೆ ಹಣ್ಣಿನ ಮೇಷ್ಟ್ರು: ಎಸ್. ಗಂಗಾಧರಯ್ಯ ಅನುಭವ ಕಥನ

ಇದರಿಂದ ಆಗಬಹುದಾದ ಅನಾಹುತದ ಸೂಚನೆಯನ್ನು ಅರಿತ ನನ್ನ ಪಕ್ಕದಲ್ಲಿದ್ದ ಶಂಕರ ಅಳುತ್ತಾ ಒಮ್ಮೆಗೇ ಮೇಲೆದ್ದು ಆಚೆ ಓಡಲು ಯತ್ನಿಸಿದ. ಅದು ಗೊತ್ತಿದ್ದವರಂತೆ ಮೇಷ್ಟ್ರು ಅವನನ್ನು ತಡೆದು ಮತ್ತೆ ಕೂರಿಸಿದರು. ಮೇಷ್ಟ್ರು ಕೈಯ್ಯಲ್ಲಿದ್ದ ಕೋಲನ್ನು ಮೇಜಿನ ಮೇಲಿಟ್ಟು ಚಣೊತ್ತು ಮೌನವಾಗಿ ಕೂತುಬಿಟ್ಟರು. ನಂತರ ನಿಂತೇ ಇದ್ದ ಶಿವನನ್ನು ಕೂರಲು ಹೇಳಿ ನಮ್ಮತ್ತ ನೋಡಿ ಮುಗುಳ್ನಕ್ಕರು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ