Advertisement

Category: ಸರಣಿ

ಉತ್ತರ ಕೊರಿಯಾ, ಇದು ಸರಿಯಾ?: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಉತ್ತರ ಕೊರಿಯಾದಲ್ಲಿ ಕಲೆ, ಸಂಸ್ಕೃತಿ ಇವೆಲ್ಲವೂ ಕೂಡಾ ಬೆಳವಣಿಗೆ ಕಾಣುತ್ತಿರುವುದು ರಾಷ್ಟ್ರೀಯತೆಯ ಹೆಸರಿನಲ್ಲಿ. ಎಲ್ಲಾ ರೀತಿಯ ಕಲಾಕೃತಿಗಳ, ಪ್ರದರ್ಶನ ಕಲೆಗಳ ಅಂತಿಮ ಉದ್ದೇಶ ರಾಷ್ಟ್ರದ ಪ್ರಗತಿ ಮತ್ತು ರಾಷ್ಟ್ರಕ್ಕೆ ಸಾಂಸ್ಕೃತಿಕ ಅಸ್ಮಿತೆಯನ್ನು ಒದಗಿಸಿಕೊಡುವುದು ಎಂಬ ಭಾವನೆಯನ್ನು ಬಲವಾಗಿ ರೂಪಿಸಲಾಗುತ್ತಿದೆ. ಉತ್ತರ ಕೊರಿಯಾದ ಪ್ರಮುಖ ಶಿಲ್ಪಕಲಾಕೃತಿಗಳು ಯಾವುವು ಎಂದು ಗಮನಹರಿಸಿದಾಗ ಕಿಮ್ ಇಲ್ ಸುಂಗ್ ಅವರ ಪ್ರತಿಮೆಗಳು ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತವೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕನ್ನಡಿಗೆ ಗೊತ್ತಿಲ್ಲ. ಕಡಲಿಗೆ ಗೊತ್ತು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರು ರಮಣೀಯ ದೃಶ್ಯಗಳನ್ನು ಕಲ್ಪಿಸಿಕೊಳ್ಳುವುದಿಲ್ಲ; ಬದಲಿಗೆ ದಿನನಿತ್ಯದ ವಿದ್ಯಮಾನಗಳ ಜತೆಗೆ ನಗರ ಮತ್ತು ಅದರ ನಿವಾಸಿಗಳ ಜತೆ ಜರಗಿದ ಮಾತುಕತೆಗಳಲ್ಲಿ ಅವರು ಪಡೆದ ಸಂತೋಷಕ್ಕೆ ಒತ್ತು ನೀಡುತ್ತಾರೆ. ಈ ಕವಿತೆಗಳ ವಿಶಿಷ್ಟ ಛಾಪು ಕವಿಯ ಮೌಖಿಕ ವಾಕ್ಚಾತುರ್ಯವೂ ಆಗಿದೆ; ಲಯ ಮತ್ತು ಮನವಿ ಜತೆಯಾಗಿರುವ ಕವಿತೆಗಳಿವು, ಮತ್ತು ಈ ಕವನಗಳು ವೋಲ್ಡ್‌ ಅವರಿಗೆ ವಿಶಾಲವಾದ ಮತ್ತು ನಿಷ್ಠಾವಂತ ಓದುಗರ ಸಮೂಹವನ್ನು ತಂದುಕೊಟ್ಟಿತ್ತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೋರ್ವೇ (Norway) ದೇಶದ ಕವಿ ಯಾನ್ ಎರಿಕ್ ವೊಲ್ಡ್-ರ (Jan Erik Vold) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕೀರು ಟೇಸ್ಟ್: ಸುಮಾವೀಣಾ ಸರಣಿ

ಇನ್ನು ದೊಡ್ಡವರು ತಪ್ಪು ಬರೆಯುವುದಿಲ್ಲವೆ… ಅವರೂ ಬರೆಯುವರು ಚನ್ನೇಗೌಡ ಬರೆಯಲು ಚೆನ್ನೈಗೌಡ ಎಂದೊಮ್ಮೆ ಕೈ ತಪ್ಪಿನಿಂದ ಬಂದಿತ್ತು. ಒಮ್ಮೆ ಹೀಗೆ…. ಹಿತೈಷಿಗಳೊಬ್ಬರು ಬಹಳ ಸಂತೋಷದಿಂದ ವಾಟ್ಸ್ಆಪ್‌ಲ್ಲಿ ಸಂದೇಶಿಸುತ್ತಿದ್ದರು ಕಡೆಗೆ ಆದಷ್ಟು ಬೇಗ ಆಗಲಿ ಎಂದು ಟೈಪಿಸುವುದರ ಬದಲು ಆದಷ್ಟು ಬೇಗ ಅಗಲಿ ಎಂದಿದ್ದನ್ನು ನೋಡಿ ಕಣ್ ಕಣ್ ಬಿಟ್ಟಹಾಗೆ ಇನ್ನೊಬ್ಬರು ನಿಮ್ಮ ಬರಹ ಸತ್ವಯುತವಾಗಿದೆ ಎನ್ನುವ ಬದಲು ಸತ್ತಂತಿದೆ ಎಂದಿದ್ದರು…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಮೂರನೆಯ ಬರಹ

Read More

ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ

ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ

Read More

ಏಕೆ ಇಷ್ಟೊಂದು ದ್ವೇಷ!: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇವರೆಲ್ಲ ಎಷ್ಟು ಸುಖವಾಗಿದ್ದಾರೆ, ಆರಾಮವಾಗಿದ್ದಾರೆ, ಯಾವುದೇ ಗೊಂದಲವಿಲ್ಲ, ತಳಮಳವಿಲ್ಲ. ಮುಖದಲ್ಲಿ ಅದೆಷ್ಟು ಜೀವಂತಿಕೆ, ಆರೋಗ್ಯ, ಉಲ್ಲಾಸ. ಯಾವುದರಲ್ಲೂ ಆತುರವಿಲ್ಲ, ಧಾವಂತವಿಲ್ಲ. ಪ್ರತಿ ಕ್ಷಣವನ್ನೂ ವಿವರವಾಗಿ, ವಿರಾಮವಾಗಿ ಅನುಭವಿಸುತ್ತಿದ್ದಾರೆ. ವಾಯುವಿಹಾರದ ಸಮಯದಲ್ಲಿ. ಟ್ರಾಮ್ ಒಳಗಡೆ ಕುಳಿತಾಗ, ಮಾರ್ಕೆಟ್‌ನಲ್ಲಿ ವ್ಯಾಪಾರ ಮಾಡುವಾಗ, ಸ್ಕೂಲ್ ಬಳಿ ಮಕ್ಕಳನ್ನು ಬಿಡಲು ಬರುವಾಗ ನೋಡಿದ್ದೇನೆ. ಎಲ್ಲರೂ ಬಿಳಿ ಬಣ್ಣದವರು, ಕೆಂಪು ಬಣ್ಣದವರು. ತುಂಬಾ ಸುಖವಾಗಿದ್ದಾರೆ, ಸಂತೃಪ್ತಿಯಿಂದಿದ್ದಾರೆ ಎಂಬ ಭಾವನೆ. ಸರಿ, ಅವರು ಸಂತೋಷವಾಗಿದ್ದರೆ, ಸುಖವಾಗಿದ್ದರೆ ನನಗೇಕೆ ಈ ರೀತಿಯ ಅಸೂಯೆ, ದ್ವೇಷ?
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ