Advertisement

Category: ಸರಣಿ

ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇರಾನ್‌ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ಅಸಂಗತವಾಗಿ ಸಂಗಾತಿ ಆಗಿದ್ದೆ

ನಿಜ; ತಾತನನ್ನು ಹೊರಗೆ ಮಲಗಿಸಿದ್ದರು. ಬಸಿದು ಹೋಗಿದ್ದ. ಮಾತು ಸರಿಯಾಗಿ ಹೊರಡುತ್ತಿರಲಿಲ್ಲ. ಹೋದ ಕೂಡಲೆ ವ್ಯಗ್ರ ನಾಯಿಗಳಂತೆ ನನ್ನ ಮೇಲೆ ಆ ಬಂಧು ಬಳಗ ಬೊಗಳಿತು. ಕೇರು ಮಾಡಲಿಲ್ಲ. ಅವನು ದರಿದ್ರ ನನ್ನಪ್ಪ ಹೆಣದಂತೆ ಅರೆ ಬೆತ್ತಲೆಯಾಗಿ ಬೀದಿಯ ಲೈಟು ಕಂಬಕ್ಕೆ ಒರಗಿಕೊಂಡು ಅಮಲಾಗಿ ಯಾರ ಮೇಲೊ ಬೈಯ್ಯುತ್ತಿದ್ದ. ನನ್ನ ಕಂಡ ಕೂಡಲೇ… ‘ವರದಕ್ಷಿಣೆಯಾ ಯೆಸ್ಟು ತಕಂದಿದ್ದಾನಂತೆ ಕೇಳೀ… ಆ ದುಡ್ಡು ನನುಗೆ ಸೇರಬೇಕೂ’ ಎಂದು ಕುಯ್‌ಗರೆಯುತ್ತಿದ್ದ. ಇವನು ಇಂಗೇ ಭಿಕ್ಷೆ ಬೇಡಿಕೊಂಡೇ ಸಾಯುತ್ತಾನೆ ಎನಿಸಿತು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 35ನೇ ಕಂತು

Read More

ಸಮತಾವಾದಿ ಪ್ರಧಾನಿಯ ವಿಲಾಯತಿ ದಿನಗಳು

ನೆಹರೂರ ಆಗಿನ ಜೀವನದೃಷ್ಟಿ ದ್ವಂದ್ವಗಳಿಂದ ಕೂಡಿತ್ತು. ಓದು, ಸಹವಾಸ, ಉಪನ್ಯಾಸ, ಸಂಪರ್ಕಗಳು ತಾತ್ವಿಕ ಪ್ರಜ್ಞೆಯನ್ನು ಸುಪ್ತವಾಗಿ ಪ್ರಭಾವಿಸಿದಂತೆ ಕಾಣಿಸುತ್ತಿದ್ದರೂ ಹೆಚ್ಚಿನ ಸಮಯ “ಆ ಕ್ಷಣದ ಸುಖ ನೆಮ್ಮದಿಯ” ನವಿರಾದ ಜೀವನ ಹಿತಕರ ಅನುಭವ ಹುಡುಕಾಟದಲ್ಲಿ ಮುಳುಗಿತ್ತು. ಹತ್ತೊಂಭತ್ತನೆಯ ಶತಮಾನದ ಮುಕ್ತಾಯಕ್ಕಿಂತ ಮೊದಲು ಬರೆಯುತ್ತಿದ್ದ ಆಸ್ಕರ್ ವೈಲ್ಡ್, ವಾಟರ್ ಪೇಟರ್ ರಿಂದ ಜನಪ್ರಿಯವಾದ ನವಿರು ಬದುಕಿನ ಹಂಬಲ ಅವರನ್ನು ಸೋಂಕಿತ್ತು. ರಾಷ್ಟ್ರೀಯತೆ, ಸ್ವಾತಂತ್ಯ್ರ ಸಂಗ್ರಾಮದ ಒಲವು ಸೆಳೆತಗಳು ಆರಂಭವಾಗಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ದಿವಂಗತ ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಕುರಿತ ಮರವಂತೆ ಬರಹ ಇಲ್ಲಿದೆ.

Read More

ಸೋವಿಯತ್ ದೇಶದಲ್ಲಿ ಮಿಂಚಿದ ನಮ್ಮ ಧ್ವಜ

ತಾಷ್ಕೆಂಟ್ ವಿಮಾನ ನಿಲ್ದಾಣದಿಂದ ಹೊರಗೆ ಬಂದ ಕೂಡಲೇ ನನಗೆ ಆಶ್ಚರ್ಯ ಕಾದಿತ್ತು. ಎಲ್ಲೆಂದರಲ್ಲಿ ಭಾರತದ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬೀದಿಗಳು ನಮ್ಮ ಧ್ವಜದಿಂದ ಕೂಡಿದ ಪರಪರಿಗಳಿಂದ ಅಲಂಕೃತವಾಗಿದ್ದವು. ಎಲ್ಲೆಂದರಲ್ಲಿ ನಮ್ಮ ರವಿಶಂಕರ್ ಸಿತಾರ್ ಮತ್ತು ಬಿಸ್ಮಿಲ್ಲಾ ಖಾನ್ ಶಹನಾಯಿ ನಾದಮಾಧುರ್ಯಕ್ಕೆ ಕಿವಿಗಳು ತೆರೆದುಕೊಳ್ಳತೊಡಗಿದವು. ನಮ್ಮ ಗೈಡ್ ನಮ್ಮನ್ನು ಪಂಚತಾರಾ “ಹೋಟೆಲ್ ತಾಷ್ಕೆಂಟ್”ಗೆ ಒಯ್ದರು. ಅಲ್ಲಿಯೆ ರಿಷಪ್ಷನಿಸ್ಟ್ “ಇಂಜಿಷ್ಕಿ ದ್ರುಜಿಯೆ” (ಇಂಡಿಯನ್ ಫ್ರೆಂಡ್ಸ್) ಎಂದು ಖುಷಿಯಿಂದ ಬರಮಾಡಿಕೊಂಡರು. ಭಾರತದ ಬಗ್ಗೆ ಸೋವಿಯತ್ ದೇಶದವರಿಗೆ ಇದ್ದ ಅಭಿಮಾನ, ಪ್ರೀತಿ, ಗೌರವ ಕಂಡು ಆಶ್ಚರ್ಯಚಕಿತನಾದೆ.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 43ನೇ ಕಂತು ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ