Advertisement

Category: ಸರಣಿ

ಒಳಗುದಿಯ ದೀಪ ಉರಿಯುತಿತ್ತು

ಆಗ ನನಗೆ ಒಂದು ಸುಂದರ ಹವ್ಯಾಸ ಇತ್ತು. ಈಗಲೂ ಅದನ್ನು ಬಿಟ್ಟಿಲ್ಲ… ಹಳೆಯ ಹಿಂದಿ ಸಿನಿಮಾ ಹಾಡುಗಳನ್ನು ಕೇಳುತ್ತಲೇ ಇರುವುದು… ಆ ಮುಖೇಶ್, ರಫೀ, ಸೈಗಲ್, ಕಿಶೋರ್ ಕುಮಾರ್, ಲತಾ ಅವರ ಕೊನೆ ಮೊದಲಿಲ್ಲದ ಹಾಡುಗಳ ನನ್ನ ಪೂರ್ವಿಕರಿಗೆಲ್ಲ ಕೇಳಿಸಬೇಕು ಎಂಬಂತೆ ಸುಪ್ತ ಪ್ರಜ್ಞೆಯಲ್ಲಿ ಮಲಗಿದ್ದ ಅವರನ್ನೆಲ್ಲ ಎಬ್ಬಿಸಿ ಈ ಹಾಡನ್ನು ಕೇಳಿ… ಈ ಅನಂತ ಹಿಂದೂಸ್ತಾನಿ ಸಂಗೀತದ ಸಮುದ್ರದ ಅಲೆಯ ರಾಗಗಳ ಆಲಿಸಿ ಎನ್ನುತ್ತಿದ್ದೆ. ನನ್ನ ಅಳಲನ್ನು ಈ ಸಂಗೀತಗಾರರು ಅದೆಷ್ಟು ಸಲ ಸಂತೈಸಿದ್ದಾರೊ ಏನೊ..ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆಯ 33ನೇ ಕಂತು

Read More

ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್‌ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್‌ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ

Read More

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ನನ್ನ ತಂದೆ ಶರಣರಂತೆ, ಸಂತರಂತೆ

ಅವರು ಜೀವನದಲ್ಲಿ ಸಾಲವನ್ನೇ ಮಾಡಲಿಲ್ಲ. ದುಡಿಮೆಯೆ ಅವರ ಬ್ಯಾಂಕು.  ವಾಪಸ್ ಮಾಡುವ ಶಕ್ತಿಇಲ್ಲವೆಂದ ಮೇಲೆ ಸಾಲ ಮಾಡಬಾರದು ಎಂಬುದು ಅವರ ನೀತಿಯಾಗಿತ್ತು. ಸಮಾಜ ಜಾತಿ ಉಪಜಾತಿಗಳ ಬಂಧನದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಸ್ಪೃಶ್ಯತೆ ಆಚರಿಸುತ್ತಿದ್ದರೂ  ಆ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ‘ನೀವು ಹಾಗಿರಬೇಕು, ಹೀಗಿರಬೇಕು’ ಎಂದು ಯಾರಿಗೂ ಉಪದೇಶ ಮಾಡಲಿಲ್ಲ. ಆದರೆ ಸ್ವಂತಕ್ಕೆ ಜಾತಿ, ಧರ್ಮ ಮತ್ತು ಅಸ್ಪೃಶ್ಯತೆ ಮುಂತಾದವುಗಳನ್ನು ಮೀರಿ ಬದುಕಿದವರು. ನಾನು ಶನಿವಾರ ಜನಿಸಿದ್ದರಿಂದ ಪ್ರತಿ ಶನಿವಾರ ನನ್ನನ್ನು ಕರೆದುಕೊಂಡು ಶನಿದೇವರ ಗುಡಿಗೆ ಹೋಗುತ್ತಿದ್ದರು. ರಂಜಾನ್‌ ದರ್ಗಾ ಬರೆಯುವ  ನೆನಪಾದಾಗಲೆಲ್ಲ ಸರಣಿ

Read More

ಅಸ್ಪೃಶ್ಯ ಆಕಾಶದ ಚಲನೆ

ಚಲುವರಾಜನ ತಮ್ಮ ಚಂದ್ರ ಹಾಸ್ಟಲಲ್ಲೆ ಇದ್ದ. ಇನ್ನು ಚಿಕ್ಕವನು. ಬಾರೋ ಎಂದು ಕರೆದೊಯ್ದು ಎಲ್ಲ ಕ್ಲೀನ್ ಮಾಡಿಸಿದೆ. ಆ ಬ್ಯಾಗಲ್ಲಿದ್ದ ಅಕ್ಕಿ ಎಂತಾವು ನೋಡು ಎಂದೆ. ಯೋಗ್ಯ ಇದ್ದರೆ ಕೊಂಡೊಯ್ಯುವ ಎನಿಸಿತ್ತು. ಕಲ್ಲು ಮಿಶ್ರತ ಹುಳು ಹಿಡಿದ ಬೂಸ್ಲು ನುಚ್ಚಕ್ಕಿಯಾಗಿದ್ದವು. ಆ ನಾಯಿಗೆ ಇದನ್ನು ಬೇಯಿಸಿ ಹಾಕುತ್ತಿದ್ದರೆ ಈ ಪ್ರಾಧ್ಯಾಪಕರು.. ‘ನೀನೂ ಅದನ್ನೆ ಊಟ ಮಾಡಪ್ಪ’ ಎಂದಿದ್ದನಲ್ಲ ಮಹಾಶಯ! ಆ ನಾಯಿ ಮನೆ ಬಿಟ್ಟು ಹೋಗಿರುವುದರಲ್ಲಿ ನಮ್ಮ ಪಾಲು ಎಷ್ಟಿದೆಯೊ ಏನೊ!
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ 32ನೇಯ ಕಂತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ